Andolana originals

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ ಗುತ್ತಿಗೆ ಪಡೆದಿರುವವರು ಉತ್ತರ ಭಾರತದವರಾಗಿದ್ದು, ಅವರಿಗೆ ಕನ್ನಡ ಭಾಷೆ ತಿಳಿಯುತ್ತಿಲ್ಲ. ಅವರು ಎಲ್ಲೆಂದರಲ್ಲಿ ಅಗೆದು ಹಾಗೇ ಬಿಡುತ್ತಿದ್ದಾರೆ. ಪುಟ್ಟ ಮಕ್ಕಳು ಹಳ್ಳಕ್ಕೆ ಬೀಳುವ ಸಾಧ್ಯತೆಯಿರುತ್ತದೆ ಹಾಗೂ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಬಡಾವಣೆಯ ಕೆಲವು ನಿವಾಸಿಗಳು ಮನೆಯ ಮುಂದೆ ಹಾಕಿಸಿದ್ದ ಕಾಂಕ್ರಿಟ್‌ನ್ನೂ ಅಗೆದು ಹಾಳು ಮಾಡಿದ್ದಲ್ಲದೇ ನೀರಿನ ಪೈಪುಗಳಿವೆಯೇ, ಗ್ಯಾಸ್ ಪೈಪ್ ಲೈನ್ ಮತ್ತು ವಿದ್ಯುತ್ ಕೇಬಲ್‌ಗಳಿವೆಯೇಎಂಬುದನ್ನು ಅರಿಯದೇ, ಕೆಲವು ಸಂದರ್ಭಗಳಲ್ಲಿ ತಿಳಿಸಿದ್ದರೂ ಉಡಾಫೆಯಾಗಿ ವರ್ತಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿದ್ದಾರೆ. ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್‌ನ ಮನೆಯ ಮುಂದೆ ಹಳ್ಳ ತೆಗೆದಿದ್ದು, ಅಲ್ಲಿನ ನೀರಿನ ಪೈಪು ಒಡೆದು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೇಬಲ್ ಅಳವಡಿಕೆ ಕಾಮಗಾರಿಗೂ ಮುನ್ನ ನಿವಾಸಿಗಳನ್ನು ಸಂಪರ್ಕಿಸಿ, ಗ್ಯಾಸ್, ನೀರು, ವಿದ್ಯುತ್ ಕೇಬಲ್ ಎಲ್ಲಿ ಹೋಗಿದೆ ಎಂಬುದನ್ನು ಖಚಿತಪಡಿಸಿಕೊಂಡು, ಯಾರಿಗೂ ತೊಂದರೆಯಾಗದಂತೆ ಕಾರ್ಯನಿರ್ವಹಿಸುವುದು ಅವಶ್ಯ.

 -ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

11 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

11 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

11 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

11 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

11 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

11 hours ago