Andolana originals

ಓದುಗರ ಪತ್ರ:  ಕುರ್ಚಿ ಕಿತ್ತಾಟ, ಮತದಾರರಲ್ಲಿ ಗೊಂದಲ

ಮುಖ್ಯಮಂತ್ರಿ ಗಾದಿ ಕುರಿತು ರಾಜ್ಯದಲ್ಲಿ ಗುದ್ದಾಟ ದಿನೇ ದಿನೇ ತಾರಕಕ್ಕೇರುತ್ತಿದೆ.ಇದರಿಂದ ರಾಜ್ಯದ ಮತದಾರರಲ್ಲಿ ಗೊಂದಲ ಉಂಟಾಗಿದೆ. ಅಭಿವೃದ್ಧಿ ಕೆಲಸಗಳಿಗೂ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಬಗ್ಗೆ ಮಾತುಕತೆ ನಡೆದಿದೆಯೇ ಎಂಬುದನ್ನು ಕಾಂಗ್ರೆಸ್ ವರಿಷ್ಠರು ಮತದಾರ ಪ್ರಭುಗಳ ಮುಂದೆ ಬಹಿರಂಗಪಡಿಸಲಿ.

ರಾಜ್ಯದ ಜನ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.ಈಗ ಅವರಲ್ಲಿ ಗೊಂದಲ ಸೃಷ್ಟಿಸಬೇಡಿ. ಸರ್ಕಾರದಿಂದ ಅಭಿವೃದ್ಧಿ ಕೆಲಸಗಳನ್ನು ನಿರೀಕ್ಷಿಸುತ್ತಿದ್ದ ಮತದಾರರು ದಿನನಿತ್ಯ ಅಧಿಕಾರ ಹಂಚಿಕೆಯ ವಿಷಯವನ್ನೇ ದೃಶ್ಯ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ನೋಡುವಂತಾಗಿದೆ.ಒಬ್ಬೊಬ್ಬ ನಾಯಕನ ಮಾತುಗಳೂ ಗೊಂದಲ ಮಯವಾಗಿವೆ.ಆದಷ್ಟು ಬೇಗ ಅಧಿಕಾರ ಹಂಚಿಕೆಯ ಗೊಂದಲವನ್ನು ಪರಿಹರಿಸಿ, ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗದಂತೆ ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳಬೇಕಿದೆ. ಏಕೆಂದರೆ ಇದು ಕಾಂಗ್ರೆಸ್‌ನ ಆಂತರಿಕ ವಿಷಯ ಎನ್ನುವುದಕ್ಕಿಂತ ರಾಜ್ಯದ ಜನತೆಯ ಗೌರವ ಮತ್ತು ಅಭಿವೃದ್ಧಿಯ ಪ್ರಶ್ನೆಯಾಗಿದೆ.

– ಪಿ.ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

4 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

7 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

16 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago