ಓದುಗರ ಪತ್ರ
ಮುಖ್ಯಮಂತ್ರಿ ಗಾದಿ ಕುರಿತು ರಾಜ್ಯದಲ್ಲಿ ಗುದ್ದಾಟ ದಿನೇ ದಿನೇ ತಾರಕಕ್ಕೇರುತ್ತಿದೆ.ಇದರಿಂದ ರಾಜ್ಯದ ಮತದಾರರಲ್ಲಿ ಗೊಂದಲ ಉಂಟಾಗಿದೆ. ಅಭಿವೃದ್ಧಿ ಕೆಲಸಗಳಿಗೂ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಬಗ್ಗೆ ಮಾತುಕತೆ ನಡೆದಿದೆಯೇ ಎಂಬುದನ್ನು ಕಾಂಗ್ರೆಸ್ ವರಿಷ್ಠರು ಮತದಾರ ಪ್ರಭುಗಳ ಮುಂದೆ ಬಹಿರಂಗಪಡಿಸಲಿ.
ರಾಜ್ಯದ ಜನ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.ಈಗ ಅವರಲ್ಲಿ ಗೊಂದಲ ಸೃಷ್ಟಿಸಬೇಡಿ. ಸರ್ಕಾರದಿಂದ ಅಭಿವೃದ್ಧಿ ಕೆಲಸಗಳನ್ನು ನಿರೀಕ್ಷಿಸುತ್ತಿದ್ದ ಮತದಾರರು ದಿನನಿತ್ಯ ಅಧಿಕಾರ ಹಂಚಿಕೆಯ ವಿಷಯವನ್ನೇ ದೃಶ್ಯ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ನೋಡುವಂತಾಗಿದೆ.ಒಬ್ಬೊಬ್ಬ ನಾಯಕನ ಮಾತುಗಳೂ ಗೊಂದಲ ಮಯವಾಗಿವೆ.ಆದಷ್ಟು ಬೇಗ ಅಧಿಕಾರ ಹಂಚಿಕೆಯ ಗೊಂದಲವನ್ನು ಪರಿಹರಿಸಿ, ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗದಂತೆ ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳಬೇಕಿದೆ. ಏಕೆಂದರೆ ಇದು ಕಾಂಗ್ರೆಸ್ನ ಆಂತರಿಕ ವಿಷಯ ಎನ್ನುವುದಕ್ಕಿಂತ ರಾಜ್ಯದ ಜನತೆಯ ಗೌರವ ಮತ್ತು ಅಭಿವೃದ್ಧಿಯ ಪ್ರಶ್ನೆಯಾಗಿದೆ.
– ಪಿ.ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…