ಓದುಗರ ಪತ್ರ
ಮುಖ್ಯಮಂತ್ರಿ ಗಾದಿ ಕುರಿತು ರಾಜ್ಯದಲ್ಲಿ ಗುದ್ದಾಟ ದಿನೇ ದಿನೇ ತಾರಕಕ್ಕೇರುತ್ತಿದೆ.ಇದರಿಂದ ರಾಜ್ಯದ ಮತದಾರರಲ್ಲಿ ಗೊಂದಲ ಉಂಟಾಗಿದೆ. ಅಭಿವೃದ್ಧಿ ಕೆಲಸಗಳಿಗೂ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಬಗ್ಗೆ ಮಾತುಕತೆ ನಡೆದಿದೆಯೇ ಎಂಬುದನ್ನು ಕಾಂಗ್ರೆಸ್ ವರಿಷ್ಠರು ಮತದಾರ ಪ್ರಭುಗಳ ಮುಂದೆ ಬಹಿರಂಗಪಡಿಸಲಿ.
ರಾಜ್ಯದ ಜನ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.ಈಗ ಅವರಲ್ಲಿ ಗೊಂದಲ ಸೃಷ್ಟಿಸಬೇಡಿ. ಸರ್ಕಾರದಿಂದ ಅಭಿವೃದ್ಧಿ ಕೆಲಸಗಳನ್ನು ನಿರೀಕ್ಷಿಸುತ್ತಿದ್ದ ಮತದಾರರು ದಿನನಿತ್ಯ ಅಧಿಕಾರ ಹಂಚಿಕೆಯ ವಿಷಯವನ್ನೇ ದೃಶ್ಯ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ನೋಡುವಂತಾಗಿದೆ.ಒಬ್ಬೊಬ್ಬ ನಾಯಕನ ಮಾತುಗಳೂ ಗೊಂದಲ ಮಯವಾಗಿವೆ.ಆದಷ್ಟು ಬೇಗ ಅಧಿಕಾರ ಹಂಚಿಕೆಯ ಗೊಂದಲವನ್ನು ಪರಿಹರಿಸಿ, ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗದಂತೆ ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳಬೇಕಿದೆ. ಏಕೆಂದರೆ ಇದು ಕಾಂಗ್ರೆಸ್ನ ಆಂತರಿಕ ವಿಷಯ ಎನ್ನುವುದಕ್ಕಿಂತ ರಾಜ್ಯದ ಜನತೆಯ ಗೌರವ ಮತ್ತು ಅಭಿವೃದ್ಧಿಯ ಪ್ರಶ್ನೆಯಾಗಿದೆ.
– ಪಿ.ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…