Andolana originals

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಚಾಮುಂಡಿಬೆಟ್ಟವನ್ನು ಅಭಿವೃದ್ಧಿ ಪಡಿಸುವ ನೆಪದಲ್ಲಿ ಗ್ರೇಟರ್ ಮೈಸೂರು ವ್ಯಾಪ್ತಿಗೆ ಒಳಪಡಿಸದೆ, ಧಾರ್ಮಿಕವಾಗಿ ಹಾಗೂ ಪ್ರವಾಸಿ ತಾಣವಾಗಿರುವ ಚಾಮುಂಡಿ ಬೆಟ್ಟವನ್ನು ಗ್ರಾಮ ಪಂಚಾಯಿತಿಯಲ್ಲೇ ಉಳಿಸಿಕೊಡಬೇಕು ಎಂದು ಅಲ್ಲಿನ ಗ್ರಾಮಸ್ಥರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿರುವುದು ಶ್ಲಾಘನೀಯ. ಈಗಾಗಲೇ ಬೆಟ್ಟ ಕೆಲವು ಕಡೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ, ಚಾಮುಂಡಿ ಬೆಟ್ಟ ಗ್ರೇಟರ್ ಮೈಸೂರಿಗೆ ಸೇರ್ಪಡೆಯಾದರೆ ಅಭಿವೃದ್ಧಿ ನೆಪದಲ್ಲಿ ಇನ್ನೂ ಹೆಚ್ಚಿನ ಅನಾಹುತವಾಗುವುದರಲ್ಲಿ ಸಂದೇಹವೇ ಇಲ್ಲ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

2 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

8 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

1 hour ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

1 hour ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

1 hour ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

1 hour ago