Andolana originals

ಓದುಗರ ಪತ್ರ: ಕೀಳುಮಟ್ಟದ ರಾಜಕಾರಣ ತರವಲ್ಲ

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂಬ ಅನುಮಾನವಿದೆ, ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇದನ್ನು ಕೀಳುಮಟ್ಟದ ರಾಜಕಾರಣ ಎಂತಲೇ ಹೇಳಬಹುದು. ಬೈರತಿ ಸುರೇಶ್ ಮುಡಾ ಹಗರಣದ ಆರೋಪಿಯಾಗಿ ದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ಕಡತಗಳನ್ನು ಸುಟ್ಟು ಹಾಕಿದ್ದಾರೆ ಎಂದು ಯಡಿಯೂರಪ್ಪ ಆರೋಪ ಮಾಡಿದ ಬೆನ್ನಲ್ಲೇ ಬೈರತಿ ಸುರೇಶ್ ಈ ಹೇಳಿಕೆ ನೀಡುವುದು ಸರಿಯೇ? ಯಡಿಯೂರಪ್ಪ ನವರ ಪತ್ನಿ ನಿಧನರಾಗಿ ೨೦ ವರ್ಷಗಳು ಕಳೆದಿವೆ. ಅದನ್ನು ಈಗ ಕೆದಕಿ ಅವಹೇಳನವಾಗಿ ಮಾತನಾಡುವುದು ಸರಿಯಲ್ಲ.

ಇತ್ತೀಚೆಗೆ ರಾಜಕಾರಣಿಗಳ ವರ್ತನೆಯೇ ಬದಲಾಗಿದೆ. ತಮ್ಮ ಎದುರಾಳಿ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿಕೊಂಡು ಸದಾ ಅವರ ಕುಟುಂಬದ ಬಗ್ಗೆಯೇ ಅವಹೇಳನವಾಗಿ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವುದು ರಾಜಕಾರಣಿಗಳಿಗೆ ಪರಿಪಾಟವಾಗಿಹೋಗಿದೆ. ಅವರ ಈ ನಡವಳಿಕೆಗಳು ಜನರಿಗೆ ಬೇಸರ ಮೂಡಿಸುತ್ತಿದ್ದು, ಜನಪ್ರತಿನಿಧಿಗಳೆನಿಸಿಕೊಂಡವರು ಕೀಳುಮಟ್ಟದ ರಾಜಕಾರಣವನ್ನು ಬಿಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

andolana

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

1 hour ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

3 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

3 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

4 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

7 hours ago