ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂಬ ಅನುಮಾನವಿದೆ, ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದನ್ನು ಕೀಳುಮಟ್ಟದ ರಾಜಕಾರಣ ಎಂತಲೇ ಹೇಳಬಹುದು. ಬೈರತಿ ಸುರೇಶ್ ಮುಡಾ ಹಗರಣದ ಆರೋಪಿಯಾಗಿ ದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ಕಡತಗಳನ್ನು ಸುಟ್ಟು ಹಾಕಿದ್ದಾರೆ ಎಂದು ಯಡಿಯೂರಪ್ಪ ಆರೋಪ ಮಾಡಿದ ಬೆನ್ನಲ್ಲೇ ಬೈರತಿ ಸುರೇಶ್ ಈ ಹೇಳಿಕೆ ನೀಡುವುದು ಸರಿಯೇ? ಯಡಿಯೂರಪ್ಪ ನವರ ಪತ್ನಿ ನಿಧನರಾಗಿ ೨೦ ವರ್ಷಗಳು ಕಳೆದಿವೆ. ಅದನ್ನು ಈಗ ಕೆದಕಿ ಅವಹೇಳನವಾಗಿ ಮಾತನಾಡುವುದು ಸರಿಯಲ್ಲ.
ಇತ್ತೀಚೆಗೆ ರಾಜಕಾರಣಿಗಳ ವರ್ತನೆಯೇ ಬದಲಾಗಿದೆ. ತಮ್ಮ ಎದುರಾಳಿ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿಕೊಂಡು ಸದಾ ಅವರ ಕುಟುಂಬದ ಬಗ್ಗೆಯೇ ಅವಹೇಳನವಾಗಿ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವುದು ರಾಜಕಾರಣಿಗಳಿಗೆ ಪರಿಪಾಟವಾಗಿಹೋಗಿದೆ. ಅವರ ಈ ನಡವಳಿಕೆಗಳು ಜನರಿಗೆ ಬೇಸರ ಮೂಡಿಸುತ್ತಿದ್ದು, ಜನಪ್ರತಿನಿಧಿಗಳೆನಿಸಿಕೊಂಡವರು ಕೀಳುಮಟ್ಟದ ರಾಜಕಾರಣವನ್ನು ಬಿಡಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…