ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂಬ ಅನುಮಾನವಿದೆ, ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದನ್ನು ಕೀಳುಮಟ್ಟದ ರಾಜಕಾರಣ ಎಂತಲೇ ಹೇಳಬಹುದು. ಬೈರತಿ ಸುರೇಶ್ ಮುಡಾ ಹಗರಣದ ಆರೋಪಿಯಾಗಿ ದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ಕಡತಗಳನ್ನು ಸುಟ್ಟು ಹಾಕಿದ್ದಾರೆ ಎಂದು ಯಡಿಯೂರಪ್ಪ ಆರೋಪ ಮಾಡಿದ ಬೆನ್ನಲ್ಲೇ ಬೈರತಿ ಸುರೇಶ್ ಈ ಹೇಳಿಕೆ ನೀಡುವುದು ಸರಿಯೇ? ಯಡಿಯೂರಪ್ಪ ನವರ ಪತ್ನಿ ನಿಧನರಾಗಿ ೨೦ ವರ್ಷಗಳು ಕಳೆದಿವೆ. ಅದನ್ನು ಈಗ ಕೆದಕಿ ಅವಹೇಳನವಾಗಿ ಮಾತನಾಡುವುದು ಸರಿಯಲ್ಲ.
ಇತ್ತೀಚೆಗೆ ರಾಜಕಾರಣಿಗಳ ವರ್ತನೆಯೇ ಬದಲಾಗಿದೆ. ತಮ್ಮ ಎದುರಾಳಿ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿಕೊಂಡು ಸದಾ ಅವರ ಕುಟುಂಬದ ಬಗ್ಗೆಯೇ ಅವಹೇಳನವಾಗಿ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವುದು ರಾಜಕಾರಣಿಗಳಿಗೆ ಪರಿಪಾಟವಾಗಿಹೋಗಿದೆ. ಅವರ ಈ ನಡವಳಿಕೆಗಳು ಜನರಿಗೆ ಬೇಸರ ಮೂಡಿಸುತ್ತಿದ್ದು, ಜನಪ್ರತಿನಿಧಿಗಳೆನಿಸಿಕೊಂಡವರು ಕೀಳುಮಟ್ಟದ ರಾಜಕಾರಣವನ್ನು ಬಿಡಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…