ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಏಕೆಂದರೆ ಈ ಕ್ಷೇತ್ರಗಳು ಮೂಲ ಸೌಕರ್ಯಗಳಿಲ್ಲದೆ ಸೊರಗಿವೆ. ಪ್ರಾಧಿಕಾರದ ಮೂಲಕ ಈ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಾದುದು ಇಂದಿನ ತುರ್ತು. ಹಾಗಾಗಿ ಸರ್ಕಾರದ ನಿರ್ಧಾರ ಸೂಕ್ತವಾದುದಾಗಿದೆ. ಈ ಕ್ಷೇತ್ರಗಳು ಪ್ರಾಚೀನ ಹಿಂದೂ ಸಂಪ್ರದಾಯಕ್ಕೆ ಸೇರಿದವುಗಳೆಂದು ಮಾನ್ಯ ಸಂಸದರು ಅಭಿಪ್ರಾಯಪಟ್ಟಿರುವುದು ಸಮಂಜಸವಲ್ಲ. ಏಕೆಂದರೆ ಈ ಕ್ಷೇತ್ರಗಳು ಶರಣ ಬಸವಣ್ಣನವರ ಸಮಾಜೋ-ಸಾಂಸ್ಕೃತಿಕ ಚಳವಳಿಯ ಮತ್ತು ಜಾತ್ಯತೀತ, ವರ್ಗಾತೀತ ನಿಲುವು ಸಂವೇದನೆಯ ಪ್ರತೀಕಗಳು. ಮಂಟೇಸ್ವಾಮಿ ಅವರ ನಿಲುವು, ವ್ಯಕ್ತಿತ್ವ ಅನುಭಾವಿ ಅಲ್ಲಮನನ್ನು ನೆನಪಿಗೆ ತರುತ್ತದೆ. ಹಾಗಾಗಿ ಪ್ರಾಚೀನ ಹಿಂದೂ ಸಂಪ್ರದಾಯಕ್ಕೂ ಈ ಕ್ಷೇತ್ರಗಳ ಮಹನೀಯರ ವಿಚಾರ, ಸಂವೇದನೆ, ಸಂಪ್ರದಾಯಕ್ಕೂ ಯಾವುದೇ ಸಂಬಂಧ ಏರ್ಪಡುವುದಿಲ್ಲ. ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಮೂಲಕ ಈ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿರುವುದನ್ನು ಸಂತಸದಿಂದ ಸ್ವಾಗತಿಸಬೇಕಾಗಿದೆ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…