ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಏಕೆಂದರೆ ಈ ಕ್ಷೇತ್ರಗಳು ಮೂಲ ಸೌಕರ್ಯಗಳಿಲ್ಲದೆ ಸೊರಗಿವೆ. ಪ್ರಾಧಿಕಾರದ ಮೂಲಕ ಈ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಾದುದು ಇಂದಿನ ತುರ್ತು. ಹಾಗಾಗಿ ಸರ್ಕಾರದ ನಿರ್ಧಾರ ಸೂಕ್ತವಾದುದಾಗಿದೆ. ಈ ಕ್ಷೇತ್ರಗಳು ಪ್ರಾಚೀನ ಹಿಂದೂ ಸಂಪ್ರದಾಯಕ್ಕೆ ಸೇರಿದವುಗಳೆಂದು ಮಾನ್ಯ ಸಂಸದರು ಅಭಿಪ್ರಾಯಪಟ್ಟಿರುವುದು ಸಮಂಜಸವಲ್ಲ. ಏಕೆಂದರೆ ಈ ಕ್ಷೇತ್ರಗಳು ಶರಣ ಬಸವಣ್ಣನವರ ಸಮಾಜೋ-ಸಾಂಸ್ಕೃತಿಕ ಚಳವಳಿಯ ಮತ್ತು ಜಾತ್ಯತೀತ, ವರ್ಗಾತೀತ ನಿಲುವು ಸಂವೇದನೆಯ ಪ್ರತೀಕಗಳು. ಮಂಟೇಸ್ವಾಮಿ ಅವರ ನಿಲುವು, ವ್ಯಕ್ತಿತ್ವ ಅನುಭಾವಿ ಅಲ್ಲಮನನ್ನು ನೆನಪಿಗೆ ತರುತ್ತದೆ. ಹಾಗಾಗಿ ಪ್ರಾಚೀನ ಹಿಂದೂ ಸಂಪ್ರದಾಯಕ್ಕೂ ಈ ಕ್ಷೇತ್ರಗಳ ಮಹನೀಯರ ವಿಚಾರ, ಸಂವೇದನೆ, ಸಂಪ್ರದಾಯಕ್ಕೂ ಯಾವುದೇ ಸಂಬಂಧ ಏರ್ಪಡುವುದಿಲ್ಲ. ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಮೂಲಕ ಈ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿರುವುದನ್ನು ಸಂತಸದಿಂದ ಸ್ವಾಗತಿಸಬೇಕಾಗಿದೆ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…