ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಏಕೆಂದರೆ ಈ ಕ್ಷೇತ್ರಗಳು ಮೂಲ ಸೌಕರ್ಯಗಳಿಲ್ಲದೆ ಸೊರಗಿವೆ. ಪ್ರಾಧಿಕಾರದ ಮೂಲಕ ಈ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಾದುದು ಇಂದಿನ ತುರ್ತು. ಹಾಗಾಗಿ ಸರ್ಕಾರದ ನಿರ್ಧಾರ ಸೂಕ್ತವಾದುದಾಗಿದೆ. ಈ ಕ್ಷೇತ್ರಗಳು ಪ್ರಾಚೀನ ಹಿಂದೂ ಸಂಪ್ರದಾಯಕ್ಕೆ ಸೇರಿದವುಗಳೆಂದು ಮಾನ್ಯ ಸಂಸದರು ಅಭಿಪ್ರಾಯಪಟ್ಟಿರುವುದು ಸಮಂಜಸವಲ್ಲ. ಏಕೆಂದರೆ ಈ ಕ್ಷೇತ್ರಗಳು ಶರಣ ಬಸವಣ್ಣನವರ ಸಮಾಜೋ-ಸಾಂಸ್ಕೃತಿಕ ಚಳವಳಿಯ ಮತ್ತು ಜಾತ್ಯತೀತ, ವರ್ಗಾತೀತ ನಿಲುವು ಸಂವೇದನೆಯ ಪ್ರತೀಕಗಳು. ಮಂಟೇಸ್ವಾಮಿ ಅವರ ನಿಲುವು, ವ್ಯಕ್ತಿತ್ವ ಅನುಭಾವಿ ಅಲ್ಲಮನನ್ನು ನೆನಪಿಗೆ ತರುತ್ತದೆ. ಹಾಗಾಗಿ ಪ್ರಾಚೀನ ಹಿಂದೂ ಸಂಪ್ರದಾಯಕ್ಕೂ ಈ ಕ್ಷೇತ್ರಗಳ ಮಹನೀಯರ ವಿಚಾರ, ಸಂವೇದನೆ, ಸಂಪ್ರದಾಯಕ್ಕೂ ಯಾವುದೇ ಸಂಬಂಧ ಏರ್ಪಡುವುದಿಲ್ಲ. ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಮೂಲಕ ಈ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿರುವುದನ್ನು ಸಂತಸದಿಂದ ಸ್ವಾಗತಿಸಬೇಕಾಗಿದೆ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…