ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಏಕೆಂದರೆ ಈ ಕ್ಷೇತ್ರಗಳು ಮೂಲ ಸೌಕರ್ಯಗಳಿಲ್ಲದೆ ಸೊರಗಿವೆ. ಪ್ರಾಧಿಕಾರದ ಮೂಲಕ ಈ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಾದುದು ಇಂದಿನ ತುರ್ತು. ಹಾಗಾಗಿ ಸರ್ಕಾರದ ನಿರ್ಧಾರ ಸೂಕ್ತವಾದುದಾಗಿದೆ. ಈ ಕ್ಷೇತ್ರಗಳು ಪ್ರಾಚೀನ ಹಿಂದೂ ಸಂಪ್ರದಾಯಕ್ಕೆ ಸೇರಿದವುಗಳೆಂದು ಮಾನ್ಯ ಸಂಸದರು ಅಭಿಪ್ರಾಯಪಟ್ಟಿರುವುದು ಸಮಂಜಸವಲ್ಲ. ಏಕೆಂದರೆ ಈ ಕ್ಷೇತ್ರಗಳು ಶರಣ ಬಸವಣ್ಣನವರ ಸಮಾಜೋ-ಸಾಂಸ್ಕೃತಿಕ ಚಳವಳಿಯ ಮತ್ತು ಜಾತ್ಯತೀತ, ವರ್ಗಾತೀತ ನಿಲುವು ಸಂವೇದನೆಯ ಪ್ರತೀಕಗಳು. ಮಂಟೇಸ್ವಾಮಿ ಅವರ ನಿಲುವು, ವ್ಯಕ್ತಿತ್ವ ಅನುಭಾವಿ ಅಲ್ಲಮನನ್ನು ನೆನಪಿಗೆ ತರುತ್ತದೆ. ಹಾಗಾಗಿ ಪ್ರಾಚೀನ ಹಿಂದೂ ಸಂಪ್ರದಾಯಕ್ಕೂ ಈ ಕ್ಷೇತ್ರಗಳ ಮಹನೀಯರ ವಿಚಾರ, ಸಂವೇದನೆ, ಸಂಪ್ರದಾಯಕ್ಕೂ ಯಾವುದೇ ಸಂಬಂಧ ಏರ್ಪಡುವುದಿಲ್ಲ. ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಮೂಲಕ ಈ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿರುವುದನ್ನು ಸಂತಸದಿಂದ ಸ್ವಾಗತಿಸಬೇಕಾಗಿದೆ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…