ಓದುಗರ ಪತ್ರ
ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆಯು ಗಿಡ-ಮರಗಳ ಬೇರುಗಳಿಂದ ಶಿಥಿಲಗೊಳ್ಳುತ್ತಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಶತಮಾನಗಳಿಂದಲೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿರುವ, ಯಾರೂ ಬೇಧಿಸಲಾಗದ ಕೋಟೆ ಎಂದೇ ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಚಿತ್ರದುರ್ಗ ಕೋಟೆಯು ಇತ್ತೀಚಿನ ವರ್ಷಗಳಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಳ್ಳುತ್ತಿರುವುದು ದುರಂತವೇ ಸರಿ. ಭಾರತೀಯ ಪುರಾತತ್ವ ಮತ್ತು ಸರ್ವೆಕ್ಷಣಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದೂರು ಬಂದಾಗ ಮಾತ್ರ ಚಿತ್ರದುರ್ಗದ ಕೋಟೆಯ ಸಮಸ್ಯೆಗಳ ಕಡೆ ಗಮನಹರಿಸುತ್ತಾರೆಯೇ ವಿನಾ ಸಮಯಾನುಸಾರ ಕೋಟೆಯ ರಕ್ಷಣೆಗೆ ಮುಂದಾಗುವುದಿಲ್ಲ. ಇದರಿಂದಾಗಿ ಕೋಟೆ ಶಿಥಿಲಗೊಳ್ಳುತ್ತಿದೆ. ಅಧಿಕಾರಿಗಳು ಆಗಾಗ್ಗೆ ಕೋಟೆ, ಅಲ್ಲಿನ ಸ್ಮಾರಕಗಳಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅವುಗಳಿಗೆ ಹಾನಿಯಾಗಿದ್ದರೆ ಕೂಡಲೇ ಅವುಗಳ ರಕ್ಷಣೆಗೆ ಕ್ರಮವಹಿಸಬೇಕು. ಆಗ ಮಾತ್ರ ಐತಿಹಾಸಿಕ ಸ್ಮಾರಕಗಳ ರಕ್ಷಣೆ ಸಾಧ್ಯ. ಚಿತ್ರದುರ್ಗದ ಕೋಟೆ ಒಂದು ಪ್ರವಾಸಿ ತಾಣವಾಗಿದ್ದು, ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇದರಿಂದ ಸರ್ಕಾರಕ್ಕೂ ಆದಾಯವಿದೆ. ಆದ್ದರಿಂದ ಸರ್ಕಾರ ಇಂತಹ ಐತಿಹಾಸಿಕ ಸ್ಥಳಗಳ ರಕ್ಷಣೆಗೆ ಮುಂದಾಗಬೇಕು.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…