ಓದುಗರ ಪತ್ರ
ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆಯು ಗಿಡ-ಮರಗಳ ಬೇರುಗಳಿಂದ ಶಿಥಿಲಗೊಳ್ಳುತ್ತಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಶತಮಾನಗಳಿಂದಲೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿರುವ, ಯಾರೂ ಬೇಧಿಸಲಾಗದ ಕೋಟೆ ಎಂದೇ ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಚಿತ್ರದುರ್ಗ ಕೋಟೆಯು ಇತ್ತೀಚಿನ ವರ್ಷಗಳಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಳ್ಳುತ್ತಿರುವುದು ದುರಂತವೇ ಸರಿ. ಭಾರತೀಯ ಪುರಾತತ್ವ ಮತ್ತು ಸರ್ವೆಕ್ಷಣಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದೂರು ಬಂದಾಗ ಮಾತ್ರ ಚಿತ್ರದುರ್ಗದ ಕೋಟೆಯ ಸಮಸ್ಯೆಗಳ ಕಡೆ ಗಮನಹರಿಸುತ್ತಾರೆಯೇ ವಿನಾ ಸಮಯಾನುಸಾರ ಕೋಟೆಯ ರಕ್ಷಣೆಗೆ ಮುಂದಾಗುವುದಿಲ್ಲ. ಇದರಿಂದಾಗಿ ಕೋಟೆ ಶಿಥಿಲಗೊಳ್ಳುತ್ತಿದೆ. ಅಧಿಕಾರಿಗಳು ಆಗಾಗ್ಗೆ ಕೋಟೆ, ಅಲ್ಲಿನ ಸ್ಮಾರಕಗಳಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅವುಗಳಿಗೆ ಹಾನಿಯಾಗಿದ್ದರೆ ಕೂಡಲೇ ಅವುಗಳ ರಕ್ಷಣೆಗೆ ಕ್ರಮವಹಿಸಬೇಕು. ಆಗ ಮಾತ್ರ ಐತಿಹಾಸಿಕ ಸ್ಮಾರಕಗಳ ರಕ್ಷಣೆ ಸಾಧ್ಯ. ಚಿತ್ರದುರ್ಗದ ಕೋಟೆ ಒಂದು ಪ್ರವಾಸಿ ತಾಣವಾಗಿದ್ದು, ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇದರಿಂದ ಸರ್ಕಾರಕ್ಕೂ ಆದಾಯವಿದೆ. ಆದ್ದರಿಂದ ಸರ್ಕಾರ ಇಂತಹ ಐತಿಹಾಸಿಕ ಸ್ಥಳಗಳ ರಕ್ಷಣೆಗೆ ಮುಂದಾಗಬೇಕು.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…