Andolana originals

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ ತಂದಿದೆ.

ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದ ಮಲ್ಟಿ ಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ನಿಗದಿಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್‌ಗಳಿಗೆ ಬಂದು ಸಿನಿಮಾ ನೋಡುತ್ತಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಸಿನಿಮಾ ಟಿಕೆಟ್‌ಗಳಿಗೆ ಯಾವುದೇ ನಿಗದಿತ ದರ ಇಲ್ಲದಿರುವ ಪರಿಣಾಮ ಥಿಯೇಟರ್‌ಗಳ ಮಾಲೀಕರು ತಮ್ಮಿಚ್ಛೆಯನುಸಾರ ದರ ನಿಗದಿ ಮಾಡುತ್ತಿದ್ದು, ಸಿನಿಮಾ ಬಿಡುಗಡೆಯಾದ ಬಳಿಕ ದಿನಕಳೆದಂತೆ ದರ ಏರಿಳಿತವಾಗುತ್ತದೆ. ಅಲ್ಲದೆ ಅನ್ಯಭಾಷೆಯ ಚಿತ್ರಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಿ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಾರೆ. ಇದರಿಂದಾಗಿ ಜನರು ಥಿಯೇಟರ್ ಗಳಿಗೆ ಬರಲು ಹಿಂದೇಟು ಹಾಕುತ್ತಾರೆ. ಇದೆಲ್ಲವನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೨೦೧೩ರಲ್ಲಿ ತಮ್ಮದೇ ಸರ್ಕಾರದ ಅಧಿಕಾರದಲ್ಲಿದ್ದಾಗ ಏಕ ಪರದೆ ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ಒಂದೇ ದರ ನಿಗದಿ ಮಾಡಿದ್ದನ್ನು ನೆನೆಪಿಸಿಕೊಂಡು, ಸಿನಿ ಪ್ರಿಯರಿಗೆ ಅನುಕೂಲವಾಗುವಂತೆ ದರ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಹೆಚ್ಚಿನ ಮಂದಿ ಕುಟುಂಬ ಸಮೇತರಾಗಿ ಸಿನಿಮಾ ವೀಕ್ಷಿಸಲು ಅನುಕೂಲವಾಗಲಿದ್ದು, ಕನ್ನಡ ಸಿನಿಮಾಗಳ ಬೆಳವಣಿಗೆಯೂ ಆಗಲಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

18 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

43 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

1 hour ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

4 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

4 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

4 hours ago