ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ ತಂದಿದೆ.
ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದ ಮಲ್ಟಿ ಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ನಿಗದಿಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್ಗಳಿಗೆ ಬಂದು ಸಿನಿಮಾ ನೋಡುತ್ತಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಸಿನಿಮಾ ಟಿಕೆಟ್ಗಳಿಗೆ ಯಾವುದೇ ನಿಗದಿತ ದರ ಇಲ್ಲದಿರುವ ಪರಿಣಾಮ ಥಿಯೇಟರ್ಗಳ ಮಾಲೀಕರು ತಮ್ಮಿಚ್ಛೆಯನುಸಾರ ದರ ನಿಗದಿ ಮಾಡುತ್ತಿದ್ದು, ಸಿನಿಮಾ ಬಿಡುಗಡೆಯಾದ ಬಳಿಕ ದಿನಕಳೆದಂತೆ ದರ ಏರಿಳಿತವಾಗುತ್ತದೆ. ಅಲ್ಲದೆ ಅನ್ಯಭಾಷೆಯ ಚಿತ್ರಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಿ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಾರೆ. ಇದರಿಂದಾಗಿ ಜನರು ಥಿಯೇಟರ್ ಗಳಿಗೆ ಬರಲು ಹಿಂದೇಟು ಹಾಕುತ್ತಾರೆ. ಇದೆಲ್ಲವನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೨೦೧೩ರಲ್ಲಿ ತಮ್ಮದೇ ಸರ್ಕಾರದ ಅಧಿಕಾರದಲ್ಲಿದ್ದಾಗ ಏಕ ಪರದೆ ಮತ್ತು ಮಲ್ಟಿಪ್ಲೆಕ್ಸ್ಗಳಿಗೆ ಒಂದೇ ದರ ನಿಗದಿ ಮಾಡಿದ್ದನ್ನು ನೆನೆಪಿಸಿಕೊಂಡು, ಸಿನಿ ಪ್ರಿಯರಿಗೆ ಅನುಕೂಲವಾಗುವಂತೆ ದರ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಹೆಚ್ಚಿನ ಮಂದಿ ಕುಟುಂಬ ಸಮೇತರಾಗಿ ಸಿನಿಮಾ ವೀಕ್ಷಿಸಲು ಅನುಕೂಲವಾಗಲಿದ್ದು, ಕನ್ನಡ ಸಿನಿಮಾಗಳ ಬೆಳವಣಿಗೆಯೂ ಆಗಲಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…
ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…