ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ ತಂದಿದೆ.
ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದ ಮಲ್ಟಿ ಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ನಿಗದಿಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್ಗಳಿಗೆ ಬಂದು ಸಿನಿಮಾ ನೋಡುತ್ತಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಸಿನಿಮಾ ಟಿಕೆಟ್ಗಳಿಗೆ ಯಾವುದೇ ನಿಗದಿತ ದರ ಇಲ್ಲದಿರುವ ಪರಿಣಾಮ ಥಿಯೇಟರ್ಗಳ ಮಾಲೀಕರು ತಮ್ಮಿಚ್ಛೆಯನುಸಾರ ದರ ನಿಗದಿ ಮಾಡುತ್ತಿದ್ದು, ಸಿನಿಮಾ ಬಿಡುಗಡೆಯಾದ ಬಳಿಕ ದಿನಕಳೆದಂತೆ ದರ ಏರಿಳಿತವಾಗುತ್ತದೆ. ಅಲ್ಲದೆ ಅನ್ಯಭಾಷೆಯ ಚಿತ್ರಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಿ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಾರೆ. ಇದರಿಂದಾಗಿ ಜನರು ಥಿಯೇಟರ್ ಗಳಿಗೆ ಬರಲು ಹಿಂದೇಟು ಹಾಕುತ್ತಾರೆ. ಇದೆಲ್ಲವನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೨೦೧೩ರಲ್ಲಿ ತಮ್ಮದೇ ಸರ್ಕಾರದ ಅಧಿಕಾರದಲ್ಲಿದ್ದಾಗ ಏಕ ಪರದೆ ಮತ್ತು ಮಲ್ಟಿಪ್ಲೆಕ್ಸ್ಗಳಿಗೆ ಒಂದೇ ದರ ನಿಗದಿ ಮಾಡಿದ್ದನ್ನು ನೆನೆಪಿಸಿಕೊಂಡು, ಸಿನಿ ಪ್ರಿಯರಿಗೆ ಅನುಕೂಲವಾಗುವಂತೆ ದರ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಹೆಚ್ಚಿನ ಮಂದಿ ಕುಟುಂಬ ಸಮೇತರಾಗಿ ಸಿನಿಮಾ ವೀಕ್ಷಿಸಲು ಅನುಕೂಲವಾಗಲಿದ್ದು, ಕನ್ನಡ ಸಿನಿಮಾಗಳ ಬೆಳವಣಿಗೆಯೂ ಆಗಲಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…