ಓದುಗರ ಪತ್ರ
ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ತನ್ನ ಪಾದರಕ್ಷೆ ಎಸೆದಿರುವುದು ಅತ್ಯಂತ ಖಂಡನೀಯ. ಇಂತಹ ಅಪಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಹ ಸಂಗತಿಯಾಗಿದೆ. ಸನಾತನ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಇಂತಹ ಅಪಕೃತ್ಯ ಎಸಗಲು ಮುಂದಾಗಿದ್ದ ಘಟನೆ ಇಡೀ ನ್ಯಾಯಾಂಗ ವ್ಯವಸ್ಥೆಗೆ ಅಗೌರವ ತಂದಿದೆ.
ಸಾಮಾನ್ಯ ವ್ಯಕ್ತಿ ಇಂತಹ ಅಪಕೃತ್ಯ ಎಸಗಿದ್ದರೆ ಯಾರದೋ ಪ್ರಭಾವ ಇದರ ಹಿಂದೆ ಕೆಲಸ ಮಾಡಿದೆ ಎಂದು ಹೇಳಬಹುದಿತ್ತು, ಆದರೆ ಕಾನೂನು ತಿಳಿದಿರುವ ವಕೀಲರೇ ಇಂತಹ ಕೃತ್ಯ ಎಸಗಿರುವುದು ನ್ಯಾಯಾಂಗ ನಿಂದನೆಯಾಗಿದೆ. ಆದ್ದರಿಂದ ಸಾಂವಿಧಾನಿಕ ಪೀಠಕ್ಕೆ ಅಗೌರವ ತೋರಿದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…