ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ ಉದ್ದೇಶ ಈಡೇರಿಸಿಕೊಂಡಿರುವುದು ಮೆಚ್ಚುವಂತಹದ್ದು.
ಸಚಿವರು ರಾಜೀನಾಮೆ ಕೊಟ್ಟಿದ್ದಾರೆ ಮತ್ತು ಭವಿಷ್ಯದಲ್ಲಿ ಪರೀಕ್ಷಾ ಅಕ್ರಮಗಳು ನಡೆಯದಂತೆ ಕೈಗೊಳ್ಳಬಹುದಾದ ಎಚ್ಚರಿಕೆ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಇನ್ನು ಮುಂದೆಯೂ ಸಿಜೆಪಿ ಯುವ ಸಮುದಾಯವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಲಿ. ಆದರೆ ಅದು ಯಾವುದೇ ರಾಜಕೀಯ ಪಕ್ಷದ ಬಾಲಂಗೋಚಿಯಾಗದಿರಲಿ.
-ಕೆ.ವಿ.ವಾಸು, ಮೈಸೂರು



