Mysore
19
overcast clouds
Light
Dark

ಓದುಗರ ಪತ್ರ: ಕಟ್ಟಡದ ಅವಶೇಷಗಳ ರಾಶಿ ತೆರವುಗೊಳಿಸಿ

ಮೈಸೂರಿನ ರಾಜೀವ್‌ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ ಅವಶೇಷದ ಕಲ್ಲು, ಇಟ್ಟಿಗೆಗಳು ರಸ್ತೆಯಲ್ಲಿಯೇ ಹರಡಿಕೊಂಡಿರುವುದರಿಂದ ಮಕ್ಕಳು ಓಡುವಾಗ ಎಡವಿ ಬೀಳುತ್ತಿದ್ದಾರೆ. ಅಲ್ಲದೆ ಗಾಳಿ ಬೀಸಿದಂತೆಲ್ಲ ದೂಳು ಶಾಲೆಗೆ ತುಂಬಿಕೊಳ್ಳುತ್ತಿದೆ. ಸದ್ಯ ಈ ಸಂಬಂಧ ಮಹಾನಗರ ಪಾಲಿಕೆಯ ಅಽಕಾರಿಗಳ ಗಮನಕ್ಕೆ ತಂದ ಬಳಿಕ ಕಸ ತೆರವು ಮಾಡಿ, ಕಸ ವಿಲೇವಾರಿಯ ಸ್ಥಳವನ್ನೂ ಬದಲಾಯಿಸಿದ್ದಾರೆ. ಆದರೆ ಅಲ್ಲಿ ಸಂಗ್ರಹವಾಗಿದ್ದ ಕಟ್ಟಡ ಅವಶೇಷಗಳನ್ನು ಮಾತ್ರ ಜೆಸಿಬಿ ಯಂತ್ರದ ಮೂಲಕ ಒಂದು ಕಡೆ ಒಟ್ಟುಗೂಡಿಸಿ ರಾಶಿ ಮಾಡಲಾಗಿದ್ದು, ಅದನ್ನು ಈವರೆಗೂ ತೆರವುಗೊಳಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕಿದೆ.
-ಮೋಹನ್, ರಾಜೀವನಗರ, ಮೈಸೂರು