ಮೈಸೂರಿನ ರಾಜೀವ್ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ ಅವಶೇಷದ ಕಲ್ಲು, ಇಟ್ಟಿಗೆಗಳು ರಸ್ತೆಯಲ್ಲಿಯೇ ಹರಡಿಕೊಂಡಿರುವುದರಿಂದ ಮಕ್ಕಳು ಓಡುವಾಗ ಎಡವಿ ಬೀಳುತ್ತಿದ್ದಾರೆ. ಅಲ್ಲದೆ ಗಾಳಿ ಬೀಸಿದಂತೆಲ್ಲ ದೂಳು ಶಾಲೆಗೆ ತುಂಬಿಕೊಳ್ಳುತ್ತಿದೆ. ಸದ್ಯ ಈ ಸಂಬಂಧ ಮಹಾನಗರ ಪಾಲಿಕೆಯ ಅಽಕಾರಿಗಳ ಗಮನಕ್ಕೆ ತಂದ ಬಳಿಕ ಕಸ ತೆರವು ಮಾಡಿ, ಕಸ ವಿಲೇವಾರಿಯ ಸ್ಥಳವನ್ನೂ ಬದಲಾಯಿಸಿದ್ದಾರೆ. ಆದರೆ ಅಲ್ಲಿ ಸಂಗ್ರಹವಾಗಿದ್ದ ಕಟ್ಟಡ ಅವಶೇಷಗಳನ್ನು ಮಾತ್ರ ಜೆಸಿಬಿ ಯಂತ್ರದ ಮೂಲಕ ಒಂದು ಕಡೆ ಒಟ್ಟುಗೂಡಿಸಿ ರಾಶಿ ಮಾಡಲಾಗಿದ್ದು, ಅದನ್ನು ಈವರೆಗೂ ತೆರವುಗೊಳಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕಿದೆ.
-ಮೋಹನ್, ರಾಜೀವನಗರ, ಮೈಸೂರು
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…