Andolana originals

ಓದುಗರ ಪತ್ರ: ಕಟ್ಟಡದ ಅವಶೇಷಗಳ ರಾಶಿ ತೆರವುಗೊಳಿಸಿ

ಮೈಸೂರಿನ ರಾಜೀವ್‌ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ ಅವಶೇಷದ ಕಲ್ಲು, ಇಟ್ಟಿಗೆಗಳು ರಸ್ತೆಯಲ್ಲಿಯೇ ಹರಡಿಕೊಂಡಿರುವುದರಿಂದ ಮಕ್ಕಳು ಓಡುವಾಗ ಎಡವಿ ಬೀಳುತ್ತಿದ್ದಾರೆ. ಅಲ್ಲದೆ ಗಾಳಿ ಬೀಸಿದಂತೆಲ್ಲ ದೂಳು ಶಾಲೆಗೆ ತುಂಬಿಕೊಳ್ಳುತ್ತಿದೆ. ಸದ್ಯ ಈ ಸಂಬಂಧ ಮಹಾನಗರ ಪಾಲಿಕೆಯ ಅಽಕಾರಿಗಳ ಗಮನಕ್ಕೆ ತಂದ ಬಳಿಕ ಕಸ ತೆರವು ಮಾಡಿ, ಕಸ ವಿಲೇವಾರಿಯ ಸ್ಥಳವನ್ನೂ ಬದಲಾಯಿಸಿದ್ದಾರೆ. ಆದರೆ ಅಲ್ಲಿ ಸಂಗ್ರಹವಾಗಿದ್ದ ಕಟ್ಟಡ ಅವಶೇಷಗಳನ್ನು ಮಾತ್ರ ಜೆಸಿಬಿ ಯಂತ್ರದ ಮೂಲಕ ಒಂದು ಕಡೆ ಒಟ್ಟುಗೂಡಿಸಿ ರಾಶಿ ಮಾಡಲಾಗಿದ್ದು, ಅದನ್ನು ಈವರೆಗೂ ತೆರವುಗೊಳಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕಿದೆ.
-ಮೋಹನ್, ರಾಜೀವನಗರ, ಮೈಸೂರು

 

andolana

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

8 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

8 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

8 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

8 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

9 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

9 hours ago