ಮೈಸೂರಿನ ರಾಜೀವ್ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ ಅವಶೇಷದ ಕಲ್ಲು, ಇಟ್ಟಿಗೆಗಳು ರಸ್ತೆಯಲ್ಲಿಯೇ ಹರಡಿಕೊಂಡಿರುವುದರಿಂದ ಮಕ್ಕಳು ಓಡುವಾಗ ಎಡವಿ ಬೀಳುತ್ತಿದ್ದಾರೆ. ಅಲ್ಲದೆ ಗಾಳಿ ಬೀಸಿದಂತೆಲ್ಲ ದೂಳು ಶಾಲೆಗೆ ತುಂಬಿಕೊಳ್ಳುತ್ತಿದೆ. ಸದ್ಯ ಈ ಸಂಬಂಧ ಮಹಾನಗರ ಪಾಲಿಕೆಯ ಅಽಕಾರಿಗಳ ಗಮನಕ್ಕೆ ತಂದ ಬಳಿಕ ಕಸ ತೆರವು ಮಾಡಿ, ಕಸ ವಿಲೇವಾರಿಯ ಸ್ಥಳವನ್ನೂ ಬದಲಾಯಿಸಿದ್ದಾರೆ. ಆದರೆ ಅಲ್ಲಿ ಸಂಗ್ರಹವಾಗಿದ್ದ ಕಟ್ಟಡ ಅವಶೇಷಗಳನ್ನು ಮಾತ್ರ ಜೆಸಿಬಿ ಯಂತ್ರದ ಮೂಲಕ ಒಂದು ಕಡೆ ಒಟ್ಟುಗೂಡಿಸಿ ರಾಶಿ ಮಾಡಲಾಗಿದ್ದು, ಅದನ್ನು ಈವರೆಗೂ ತೆರವುಗೊಳಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕಿದೆ.
-ಮೋಹನ್, ರಾಜೀವನಗರ, ಮೈಸೂರು
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…