ಮೈಸೂರಿನ ರಾಜೀವ್ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ ಅವಶೇಷದ ಕಲ್ಲು, ಇಟ್ಟಿಗೆಗಳು ರಸ್ತೆಯಲ್ಲಿಯೇ ಹರಡಿಕೊಂಡಿರುವುದರಿಂದ ಮಕ್ಕಳು ಓಡುವಾಗ ಎಡವಿ ಬೀಳುತ್ತಿದ್ದಾರೆ. ಅಲ್ಲದೆ ಗಾಳಿ ಬೀಸಿದಂತೆಲ್ಲ ದೂಳು ಶಾಲೆಗೆ ತುಂಬಿಕೊಳ್ಳುತ್ತಿದೆ. ಸದ್ಯ ಈ ಸಂಬಂಧ ಮಹಾನಗರ ಪಾಲಿಕೆಯ ಅಽಕಾರಿಗಳ ಗಮನಕ್ಕೆ ತಂದ ಬಳಿಕ ಕಸ ತೆರವು ಮಾಡಿ, ಕಸ ವಿಲೇವಾರಿಯ ಸ್ಥಳವನ್ನೂ ಬದಲಾಯಿಸಿದ್ದಾರೆ. ಆದರೆ ಅಲ್ಲಿ ಸಂಗ್ರಹವಾಗಿದ್ದ ಕಟ್ಟಡ ಅವಶೇಷಗಳನ್ನು ಮಾತ್ರ ಜೆಸಿಬಿ ಯಂತ್ರದ ಮೂಲಕ ಒಂದು ಕಡೆ ಒಟ್ಟುಗೂಡಿಸಿ ರಾಶಿ ಮಾಡಲಾಗಿದ್ದು, ಅದನ್ನು ಈವರೆಗೂ ತೆರವುಗೊಳಿಸಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕಿದೆ.
-ಮೋಹನ್, ರಾಜೀವನಗರ, ಮೈಸೂರು
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…