ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಗಿರಿಜನ ಆಸ್ಪತ್ರೆಗೆ ಕೆಲ ವರ್ಷಗಳಿಂದ ಬೀಗ ಜಡಿಯಲಾಗಿದ್ದು, ಆಸ್ಪತ್ರೆ ಆವರಣದಲ್ಲಿ ಗಿಡಗಂಟಿಗಳು ಬೆಳೆದುಕೊಂಡಿವೆ.
ಅಂತರಸಂತೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ವಾದ ಬಳಿಕ ಗಿರಿಜನ ಆಸ್ಪತೆಯ ಕಟ್ಟಡವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಕಟ್ಟಡ ಪಾಳು ಬಿದ್ದಿದೆ. ಈ ಆಸ್ಪತ್ರೆಗೆ ಉತ್ತಮ ಕಟ್ಟಡ, ಹಾಸಿಗೆಗಳು ಹಾಗೂ ವಿಶಾಲವಾದ ಸ್ಥಳಾವಕಾಶವಿದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಇದರಿಂದಾಗಿ ಆಸ್ಪತ್ರೆಯ ಆವರಣದಲ್ಲಿ ಗಿಡಗಂಟಿಗಳು ಬೆಳೆದುಕೊಂಡು ಅನೈರ್ಮಲ್ಯದ ವಾತಾವರಣ ನಿಮಾರ್ಣವಾಗಿದೆ. ಕೆಲ ತಿಂಗಳ ಹಿಂದಷ್ಟೇ ಈ ಆಸ್ಪತ್ರೆಯ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ರಿಪೇರಿ ಮಾಡಲಾಯಿತು. ಅಲ್ಲದೆ ಆವರಣದಲ್ಲಿ ಒಂದು ಪ್ಯಾರಾಗೋಲವನ್ನೂ ನಿರ್ಮಿಸಲಾಯಿತು. ಇಷ್ಟಿದ್ದರೂ ಆಸ್ಪತ್ರೆಯನ್ನು ಮಾತ್ರ ತೆರೆಯುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಆಸ್ಪತ್ರೆಯನ್ನು ತೆರೆಯಬೇಕಿದೆ. ಇಲ್ಲದಿದ್ದಲ್ಲಿ ಕಟ್ಟಡವನ್ನು ಬದಲಿ ಸಾರ್ವಜನಿಕ ಕೆಲಸಗಳಿಗೆ ಬಳಸಿಕೊಳ್ಳಬೇಕಿದೆ.
-ಕಾರ್ತಿಕ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…