ಓದುಗರ ಪತ್ರ
ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯ ರಾಜ ಕಾಲುವೆ ಸಮೀಪವಿರುವ ರಸ್ತೆಯ ಬದಿಯಲ್ಲಿ ಕಳೆದೊಂದು ವಾರದಿಂದ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸ ಕೊಳೆತು ಗಬ್ಬು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ ವಾಗಿದೆ.
ಮಹಾನಗರ ಪಾಲಿಕೆಯವರು ಕಸ ವಿಲೇವಾರಿ ಮಾಡದೇ ಇರುವುದರಿಂದ ದಿನ ದಿಂದ ದಿನಕ್ಕೆ ಕಸದ ರಾಶಿ ಹೆಚ್ಚಾಗುತ್ತಿದ್ದು, ಈ ಭಾಗದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿರು ವುದರಿಂದ ಅಧಿಕಾರಿಗಳೇ ಸ್ವಚ್ಛತಾ ಕಾರ್ಯದ ಉಸ್ತುವಾರಿಗಳಾಗಿದ್ದು ನೈರ್ಮಲ್ಯ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಸಂಬಂಧಪಟ್ಟವರು ಕೂಡಲೇ ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಕಾವ್ಯ , ಮೈಸೂರು
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…