ಓದುಗರ ಪತ್ರ
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ ಮೈದಾನದ ಸ್ಥಳವನ್ನು ಶುದ್ಧೀಕರಿಸಿರುವುದು ಮೌಢ್ಯ ಮತ್ತು ಜಾತಿವಾದಿ ಮನಸ್ಸುಗಳ ಕ್ರೌರ್ಯವಾಗಿದೆ. ಉನ್ನತ ಸ್ಥಾನದಲ್ಲಿರುವ ಖರ್ಗೆ ಅವರನ್ನೇ ಜಾತೀಯತೆಯ ಭೂತಗನ್ನಡಿಯಲ್ಲಿ ನೋಡುತ್ತಿರುವ ಜಾತಿ ವ್ಯಸನಿಗಳು ಸಮಾಜಕ್ಕೆ ಮಾರಕ. ಸ್ಥಳೀಯ ಸರ್ಕಾರ್ ತಿಪ್ಪೆ ತಾರಿಸುವ ಕೆಲಸವನ್ನು ಬಿಟ್ಟು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಈ ಅಮಾನವೀಯ ಕೆಲಸಕ್ಕೆ ಒತ್ತಾಸೆಯಾಗಿದೆ ಎಂದು ಅರ್ಥೈಸಬೇಕಾಗುತ್ತದೆ. ದೂರಗಾಮಿ ನೆಲೆಯಲ್ಲಿ ಈ ಪ್ರಕರಣ ಸಾಂಪ್ರದಾಯಿಕ, ಮೌಢ್ಯಕ್ಕೆ ಅಂಟಿಕೊಂಡಿರುವವರಿಗೆ ತಕ್ಕ ಪಾಠ ಕಲಿಸುತ್ತದೆ. ಆದರೆ, ಈ ಪ್ರಕರಣದ ಸಂಬಂಧ ದೇಶಾದ್ಯಂತ ದಲಿತ ನೆಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರತಿರೋಧ ಕಾಣುತ್ತಿಲ್ಲ ಎಂಬುದು ಆಶ್ಚರ್ಯಕರಸಂಗತಿ. ದಲಿತ ಹೋರಾಟಗಾರರು ಅಲ್ಲಲ್ಲಿ ಬಿಡಿ ಬಿಡಿಯಾಗಿ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಆದರೆ, ದಲಿತ ಸಚಿವರು, ಶಾಸಕರು, ಸಂಸದರು ಗಟ್ಟಿಧ್ವನಿಯಲ್ಲಿ ಪ್ರಶ್ನಿಸಬೇಕಿತ್ತು. ಈ ಪ್ರಕರಣದ ವಿರುದ್ಧ ವಿಧಾನ ಪರಿಷತ್ನಲ್ಲಿ ಖಂಡನಾ ನಿರ್ಣಯ ಕೈಗೊಂಡಿರುವುದು ನೊಂದ ಮನಸ್ಸುಗಳಿಗೆ ಒಂದಿಷ್ಟು ಸಮಾಧಾನ ತಂದಿದೆ. ಆದರೆ, ಈ ಪ್ರಕರಣ ತಾರ್ಕಿಕವಾಗಿ ಅಂತ್ಯ ಕಾಣಲೇಬೇಕು. ಈ ಬಗ್ಗೆ ಎಲ್ಲ ಜನಪ್ರತಿನಿಧಿಗಳು, ವಿಶೇಷವಾಗಿ ದಲಿತ ಸಮುದಾಯಗಳಿಂದ ಆಯ್ಕೆಯಾಗಿರುವವರು ತಮ್ಮ ಸ್ಥಾನಗಳನ್ನು ಬದಿಗಿಟ್ಟು, ಈ ಅಮಾನುಷ ಪ್ರಕರಣವನ್ನು ಪ್ರಶ್ನಿಸಿ, ಹೋರಾಟಕ್ಕಿಳಿಯಬೇಕು.
-ಎಂ.ಎನ್.ಶಂಕರ್, ಗಾಂಧಿನಗರ, ಮೈಸೂರು
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…