Mysore
21
mist

Social Media

ಗುರುವಾರ, 29 ಜನವರಿ 2026
Light
Dark

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಓದುಗರ ಪತ್ರ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೀರು ಸರಾಗವಾಗಿ ಹರಿಯದೇ ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಮಹಾ ನಗರಪಾಲಿಕೆಯವರು ಕೂಡಲೇ ಚರಂಡಿಯಲ್ಲಿರುವ ಕಸವನ್ನು ತೆರವುಗೊಳಿಸುವ ಮೂಲಕ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.

-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

Tags:
error: Content is protected !!