ಓದುಗರ ಪತ್ರ
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ.
ನಗರದ ಚಾಮರಾಜ ಜೋಡಿ ರಸ್ತೆ, ನೃಪತುಂಗ ರಸ್ತೆ, ಶ್ರೀರಾಂಪುರ ಬೆಮೆಲ್ ನಗರ ರಸ್ತೆ, ಅಕ್ಕಮಹಾದೇವಿ ರಸ್ತೆ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಸರಸ್ವತಿಪುರಂ, ಮೀನಾ ಬಜಾರ್, ಅಶೋಕ ರಸ್ತೆ, ಸಯ್ಯಾಜಿರಾವ್ ರಸ್ತೆ, ಗಾಂಧಿ ವೃತ್ತ, ಆಂದೋಲನ ವೃತ್ತದಿಂದ ದಟ್ಟಗಳ್ಳಿ ಕಡೆಗೆ ತೆರಳುವ ರಸ್ತೆ, ಸೂರ್ಯ ಬೇಕರಿ ಸರ್ಕಲ್ ಸೇರಿದಂತೆ ವಿವಿಧೆಡೆ ಫುಟ್ಪಾತ್ ಒತ್ತುವರಿಯಾಗಿದ್ದು, ಸಾರ್ವಜನಿಕರು ರಸ್ತೆಯ ಮೇಲೆ ನಡೆಯುವಾಗ ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದರೂ ನಗರ ಪಾಲಿಕೆಯವರು ಹಾಗೂ ಪೊಲೀಸರು ಪಾದಚಾರಿ ಮಾರ್ಗದ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿಲ್ಲ. ಸಂಬಂಧಪಟ್ಟವರು ಈಗಲಾದರೂ ಪಾದಚಾರಿ ಮಾರ್ಗದ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…