ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ (ಶಾಂತಿಸಾಗರ್ ಕಾಂಪ್ಲೆಕ್ಸ್ನಿಂದ-ಕುವೆಂಪುನಗರ ಬಸ್ ಡಿಪೊ ಸರ್ಕಲ್)ಯಲ್ಲಿರುವ ಫುಟ್ಪಾತ್ ಅನ್ನು ಕೆಲವರು ಆಕ್ರಮಿಸಿಕೊಂಡು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿದ್ದರೆ, ಅನೇಕ ಮಂದಿ ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಇಟ್ಟು ಬಳಸಿಕೊಳ್ಳುತ್ತಿದ್ದಾರೆ.
ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿ ಎಂದು ನಗರ ಪಾಲಿಕೆಯ ವತಿಯಿಂದ ಸುಸಜ್ಜಿತ ಫುಟ್ಪಾತ್ಗಳನ್ನು ನಿರ್ಮಿಸಲಾಗಿದೆ. ಆದರೆ ಕೆಲವರು ಈ ಫುಟ್ಪಾತ್ಗಳಲ್ಲಿ ಇಟ್ಟಿಗೆ, ಎಂ-ಸ್ಯಾಂಡ್ ಹಾಗೂ ಇತರೆ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಇಟ್ಟಿದ್ದಾರೆ. ಇದರಿಂದಾಗಿ ಪಾದಚಾರಿಗಳು ರಸ್ತೆಯಲ್ಲಿಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ದಟ್ಟಣೆ ಹೆಚ್ಚಿರುವುದರಿಂದ ಅಪಘಾತಗಳಾಗುವಸಂಭವ ಹೆಚ್ಚಿದೆ. ಹೀಗೆ ಫುಟ್ಪಾತ್ಅನ್ನು ಆಕ್ರಮಿಸಿಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದರೂ ಪಾಲಿಕೆ ಅಧಿಕಾರಿಗಳು ಅವುಗಳನ್ನು ತೆರವುಗೊಳಿಸುವ ಗೋಜಿಗೆ ಹೋಗುತ್ತಿಲ್ಲ. ಈ ಬಗ್ಗೆ ನಗರ ಪಾಲಿಕೆಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪಾದಚಾರಿ ಮಾರ್ಗವನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…