ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ (ಶಾಂತಿಸಾಗರ್ ಕಾಂಪ್ಲೆಕ್ಸ್ನಿಂದ-ಕುವೆಂಪುನಗರ ಬಸ್ ಡಿಪೊ ಸರ್ಕಲ್)ಯಲ್ಲಿರುವ ಫುಟ್ಪಾತ್ ಅನ್ನು ಕೆಲವರು ಆಕ್ರಮಿಸಿಕೊಂಡು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿದ್ದರೆ, ಅನೇಕ ಮಂದಿ ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಇಟ್ಟು ಬಳಸಿಕೊಳ್ಳುತ್ತಿದ್ದಾರೆ.
ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿ ಎಂದು ನಗರ ಪಾಲಿಕೆಯ ವತಿಯಿಂದ ಸುಸಜ್ಜಿತ ಫುಟ್ಪಾತ್ಗಳನ್ನು ನಿರ್ಮಿಸಲಾಗಿದೆ. ಆದರೆ ಕೆಲವರು ಈ ಫುಟ್ಪಾತ್ಗಳಲ್ಲಿ ಇಟ್ಟಿಗೆ, ಎಂ-ಸ್ಯಾಂಡ್ ಹಾಗೂ ಇತರೆ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಇಟ್ಟಿದ್ದಾರೆ. ಇದರಿಂದಾಗಿ ಪಾದಚಾರಿಗಳು ರಸ್ತೆಯಲ್ಲಿಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ದಟ್ಟಣೆ ಹೆಚ್ಚಿರುವುದರಿಂದ ಅಪಘಾತಗಳಾಗುವಸಂಭವ ಹೆಚ್ಚಿದೆ. ಹೀಗೆ ಫುಟ್ಪಾತ್ಅನ್ನು ಆಕ್ರಮಿಸಿಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದರೂ ಪಾಲಿಕೆ ಅಧಿಕಾರಿಗಳು ಅವುಗಳನ್ನು ತೆರವುಗೊಳಿಸುವ ಗೋಜಿಗೆ ಹೋಗುತ್ತಿಲ್ಲ. ಈ ಬಗ್ಗೆ ನಗರ ಪಾಲಿಕೆಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪಾದಚಾರಿ ಮಾರ್ಗವನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…