ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿಯ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ನಗರದ ನಾನಾ ಭಾಗಗಳಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದ್ದು, ಜಂಬೂ ಸವಾರಿ ಸಾಗುವ ರಸ್ತೆಯನ್ನೂ ಸ್ವಚ್ಛಗೊಳಿಸಿ ಅಂದವಾಗಿ ಕಂಗೊಳಿಸುವಂತೆ ಮಾಡಿಲಾಗಿದೆ.
ದಸರಾ ಎಂದರೆ ಇಡೀ ಮೈಸೂರಿಗೆ ಹಬ್ಬವಿದ್ದಂತೆ. ನಗರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಇದರ ಅಂದ ಹೆಚ್ಚಿಸಬೇಕಾದದ್ದು ಜಿಲ್ಲಾಡಳಿತದ ಕರ್ತವ್ಯ. ಆದರೆ ಇಲ್ಲಿ ಜಂಬೂಸವಾರಿ ಸಾಗುವ ಮಾರ್ಗವನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದರೂ ಅದನ್ನು ತೆರವುಗೊಳಿಸಲು ಸಂಬಂಧಪಟ್ಟವರು ಕ್ರಮಕೈಗೊಳ್ಳುತ್ತಿಲ್ಲ. ಜಂಬೂ ಸವಾರಿ ಸಾಗುವ ಮಾರ್ಗದ ಪಕ್ಕದ ರಸ್ತೆಗಳಾದ ಮಂಡಿ ಮೊಹಲ್ಲಾ, ಚಿಕ್ಕ ಮಾರುಕಟ್ಟೆ, ಸಾಡೆ ರಸ್ತೆ, ಅಕ್ಬರ್ ರಸ್ತೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಹಾನಗರ ಪಾಲಿಕೆಯವರು ಕಸದ ರಾಶಿಯನ್ನು ತೆರವುಗೊಳಿಸದೆ ದುರ್ವಾಸನೆ ಬೀರಲಾರಂಭಿಸಿದೆ.
ಅಲ್ಲದೆ ಮಳೆ, ಗಾಳಿ ಬೀಸಿದಂತೆಲ್ಲ ಈ ತ್ಯಾಜ್ಯ ರಸ್ತೆಗೆಲ್ಲ ಹರಡುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ತೆರವುಗೊಳಿಸಬೇಕಿದೆ. -ಚಂದ್ರಶೇಖರ್, ಸಾಡೆ ರಸ್ತೆ, ಮೈಸೂರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…