ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿಯ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ನಗರದ ನಾನಾ ಭಾಗಗಳಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದ್ದು, ಜಂಬೂ ಸವಾರಿ ಸಾಗುವ ರಸ್ತೆಯನ್ನೂ ಸ್ವಚ್ಛಗೊಳಿಸಿ ಅಂದವಾಗಿ ಕಂಗೊಳಿಸುವಂತೆ ಮಾಡಿಲಾಗಿದೆ.
ದಸರಾ ಎಂದರೆ ಇಡೀ ಮೈಸೂರಿಗೆ ಹಬ್ಬವಿದ್ದಂತೆ. ನಗರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಇದರ ಅಂದ ಹೆಚ್ಚಿಸಬೇಕಾದದ್ದು ಜಿಲ್ಲಾಡಳಿತದ ಕರ್ತವ್ಯ. ಆದರೆ ಇಲ್ಲಿ ಜಂಬೂಸವಾರಿ ಸಾಗುವ ಮಾರ್ಗವನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದರೂ ಅದನ್ನು ತೆರವುಗೊಳಿಸಲು ಸಂಬಂಧಪಟ್ಟವರು ಕ್ರಮಕೈಗೊಳ್ಳುತ್ತಿಲ್ಲ. ಜಂಬೂ ಸವಾರಿ ಸಾಗುವ ಮಾರ್ಗದ ಪಕ್ಕದ ರಸ್ತೆಗಳಾದ ಮಂಡಿ ಮೊಹಲ್ಲಾ, ಚಿಕ್ಕ ಮಾರುಕಟ್ಟೆ, ಸಾಡೆ ರಸ್ತೆ, ಅಕ್ಬರ್ ರಸ್ತೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಹಾನಗರ ಪಾಲಿಕೆಯವರು ಕಸದ ರಾಶಿಯನ್ನು ತೆರವುಗೊಳಿಸದೆ ದುರ್ವಾಸನೆ ಬೀರಲಾರಂಭಿಸಿದೆ.
ಅಲ್ಲದೆ ಮಳೆ, ಗಾಳಿ ಬೀಸಿದಂತೆಲ್ಲ ಈ ತ್ಯಾಜ್ಯ ರಸ್ತೆಗೆಲ್ಲ ಹರಡುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ತೆರವುಗೊಳಿಸಬೇಕಿದೆ. -ಚಂದ್ರಶೇಖರ್, ಸಾಡೆ ರಸ್ತೆ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…