ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿಯ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ನಗರದ ನಾನಾ ಭಾಗಗಳಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದ್ದು, ಜಂಬೂ ಸವಾರಿ ಸಾಗುವ ರಸ್ತೆಯನ್ನೂ ಸ್ವಚ್ಛಗೊಳಿಸಿ ಅಂದವಾಗಿ ಕಂಗೊಳಿಸುವಂತೆ ಮಾಡಿಲಾಗಿದೆ.
ದಸರಾ ಎಂದರೆ ಇಡೀ ಮೈಸೂರಿಗೆ ಹಬ್ಬವಿದ್ದಂತೆ. ನಗರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಇದರ ಅಂದ ಹೆಚ್ಚಿಸಬೇಕಾದದ್ದು ಜಿಲ್ಲಾಡಳಿತದ ಕರ್ತವ್ಯ. ಆದರೆ ಇಲ್ಲಿ ಜಂಬೂಸವಾರಿ ಸಾಗುವ ಮಾರ್ಗವನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದರೂ ಅದನ್ನು ತೆರವುಗೊಳಿಸಲು ಸಂಬಂಧಪಟ್ಟವರು ಕ್ರಮಕೈಗೊಳ್ಳುತ್ತಿಲ್ಲ. ಜಂಬೂ ಸವಾರಿ ಸಾಗುವ ಮಾರ್ಗದ ಪಕ್ಕದ ರಸ್ತೆಗಳಾದ ಮಂಡಿ ಮೊಹಲ್ಲಾ, ಚಿಕ್ಕ ಮಾರುಕಟ್ಟೆ, ಸಾಡೆ ರಸ್ತೆ, ಅಕ್ಬರ್ ರಸ್ತೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಹಾನಗರ ಪಾಲಿಕೆಯವರು ಕಸದ ರಾಶಿಯನ್ನು ತೆರವುಗೊಳಿಸದೆ ದುರ್ವಾಸನೆ ಬೀರಲಾರಂಭಿಸಿದೆ.
ಅಲ್ಲದೆ ಮಳೆ, ಗಾಳಿ ಬೀಸಿದಂತೆಲ್ಲ ಈ ತ್ಯಾಜ್ಯ ರಸ್ತೆಗೆಲ್ಲ ಹರಡುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ತೆರವುಗೊಳಿಸಬೇಕಿದೆ. -ಚಂದ್ರಶೇಖರ್, ಸಾಡೆ ರಸ್ತೆ, ಮೈಸೂರು.
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…
ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…
ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…
ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…