Andolana originals

ಓದುಗರ ಪತ್ರ: ಕಸದ ರಾಶಿಯನ್ನು ತೆರವುಗೊಳಿಸಿ

ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿಯ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ನಗರದ ನಾನಾ ಭಾಗಗಳಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದ್ದು, ಜಂಬೂ ಸವಾರಿ ಸಾಗುವ ರಸ್ತೆಯನ್ನೂ ಸ್ವಚ್ಛಗೊಳಿಸಿ ಅಂದವಾಗಿ ಕಂಗೊಳಿಸುವಂತೆ ಮಾಡಿಲಾಗಿದೆ.

ದಸರಾ ಎಂದರೆ ಇಡೀ ಮೈಸೂರಿಗೆ ಹಬ್ಬವಿದ್ದಂತೆ. ನಗರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಇದರ ಅಂದ ಹೆಚ್ಚಿಸಬೇಕಾದದ್ದು ಜಿಲ್ಲಾಡಳಿತದ ಕರ್ತವ್ಯ. ಆದರೆ ಇಲ್ಲಿ ಜಂಬೂಸವಾರಿ ಸಾಗುವ ಮಾರ್ಗವನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದರೂ ಅದನ್ನು ತೆರವುಗೊಳಿಸಲು ಸಂಬಂಧಪಟ್ಟವರು ಕ್ರಮಕೈಗೊಳ್ಳುತ್ತಿಲ್ಲ. ಜಂಬೂ ಸವಾರಿ ಸಾಗುವ ಮಾರ್ಗದ ಪಕ್ಕದ ರಸ್ತೆಗಳಾದ ಮಂಡಿ ಮೊಹಲ್ಲಾ, ಚಿಕ್ಕ ಮಾರುಕಟ್ಟೆ, ಸಾಡೆ ರಸ್ತೆ, ಅಕ್ಬರ್ ರಸ್ತೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಹಾನಗರ ಪಾಲಿಕೆಯವರು ಕಸದ ರಾಶಿಯನ್ನು ತೆರವುಗೊಳಿಸದೆ ದುರ್ವಾಸನೆ ಬೀರಲಾರಂಭಿಸಿದೆ.

ಅಲ್ಲದೆ ಮಳೆ, ಗಾಳಿ ಬೀಸಿದಂತೆಲ್ಲ ಈ ತ್ಯಾಜ್ಯ ರಸ್ತೆಗೆಲ್ಲ ಹರಡುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ತೆರವುಗೊಳಿಸಬೇಕಿದೆ. -ಚಂದ್ರಶೇಖರ್, ಸಾಡೆ ರಸ್ತೆ, ಮೈಸೂರು.

 

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago