ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು ಮೋರಿಯ ಬದಿಯಲ್ಲೇ ಹಾಕಿ ತಿಂಗಳುಗಳೇ ಕಳೆದರೂ ತೆರವುಗೊಳಿಸದೇ ಇರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆ ಯಲ್ಲಿ ಹೋಗುವವರು ಮೂಗು ಮುಚ್ಚಿಕೊಳ್ಳುವುದು ಅನಿವಾರ್ಯವಾಗಿದೆ.
ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟವರು ಕೂಡಲೇ ಚರಂಡಿಯ ಪಕ್ಕದಲ್ಲಿರುವ ಕಸದ ರಾಶಿಯನ್ನು ತೆರವುಗೊಳಿಸುವ ಮೂಲಕ ಜನರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು





