Mysore
16
clear sky

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಓದುಗರ ಪತ್ರ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು ಮೋರಿಯ ಬದಿಯಲ್ಲೇ ಹಾಕಿ ತಿಂಗಳುಗಳೇ ಕಳೆದರೂ ತೆರವುಗೊಳಿಸದೇ ಇರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆ ಯಲ್ಲಿ ಹೋಗುವವರು ಮೂಗು ಮುಚ್ಚಿಕೊಳ್ಳುವುದು ಅನಿವಾರ್ಯವಾಗಿದೆ.

ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟವರು ಕೂಡಲೇ ಚರಂಡಿಯ ಪಕ್ಕದಲ್ಲಿರುವ ಕಸದ ರಾಶಿಯನ್ನು ತೆರವುಗೊಳಿಸುವ ಮೂಲಕ ಜನರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

Tags:
error: Content is protected !!