ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಾಪಾರಸ್ಥರೂ ಗೂಗಲ್ ಪೇ , ಫೋನ್ ಪೇ ನಲ್ಲಿ ವ್ಯವಹರಿಸಿ ವ್ಯಾಪಾರ ಮಾಡುವುದು ಸಾಮಾನ್ಯವಾಗಿತ್ತು. ಗ್ರಾಹಕರ ಬಳಿ ಮೊಬೈಲ್ ಇದ್ದರೆ ಸಾಕು ಗೂಗಲ್ ಪೇ, ಫೋನ್ ಪೇ ಮುಖಾಂತರ ಹಣ ಪಾವತಿ ಮಾಡಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು.
ಆದರೆ ಇತ್ತೀಚೆಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಸಣ್ಣಪುಟ್ಟ ವ್ಯಾಪಾರಿಗಳಿಗೂ ತೆರಿಗೆ ಕಟ್ಟುವಂತೆ ನೋಟಿಸ್ ನೀಡುತ್ತಿರುವುದರಿಂದ ಅಂಗಡಿಗಳ ಮಾಲೀಕರು ಅಂಗಡಿಯ ಮುಂದೆ ಗೂಗಲ್ ಪೇ ಹಾಗೂ ಫೋನ್ ಪೇ ಮುಖಾಂತರ ವ್ಯವಹರಿಸುವುದಿಲ್ಲ ಎಂದು ಬೋರ್ಡ್ ಹಾಕಿದ್ದಾರೆ.
ಇದರಿಂದ ಗ್ರಾಹಕರು ಅಂಗಡಿಗಳಲ್ಲಿ ಹಣ ಕೊಟ್ಟು ವ್ಯವಹಾರ ಮಾಡುವುದು ಅನಿವಾರ್ಯವಾಗಿರುವುದರಿಂದ ಚಿಲ್ಲರೆ ಸಮಸ್ಯೆ ಉದ್ಭವಿಸುತ್ತಿದೆ. ಸಂಬಂಧಪಟ್ಟವರು ಕೂಡಲೇ ವ್ಯಾಪಾರಿಗಳ ಸಮಸ್ಯೆಯನ್ನು ನಿವಾರಿಸಿ ಗೂಗಲ್ ಪೇ, ಫೋನ್ ಪೇ ಮೂಲಕ ವ್ಯವಹಾರ ನಡೆಸಲು ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
-ಎಂ. ಎಸ್. ಉಷಾ ಪ್ರಕಾಶ್ , ಎಸ್. ಬಿ.ಎಂ.ಕಾಲೋನಿ ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…