ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ. ಈ ಸಮೀಕ್ಷೆ ಕಾರ್ಯದ ಫಾರಂನಲ್ಲಿ ಕೆಲವು ಬೇಡದ ಅಂಶಗಳು ಸೇರಿವೆ.
ನೀವು ಯಾವ ಜತಿಗೆ ಸೇರಿದವರು? ನೀವು ಆದಾಯ ತೆರಿಗೆ ಪಾವತಿದಾರರೇ ? ನಿಮ್ಮ ವೃತ್ತಿ ಯಾವುದು? ಇಂತಹ ಪ್ರಶ್ನೆಗಳಿದ್ದು, ಫಾರಂನಲ್ಲಿ ಕಡ್ಡಾಯವಾಗಿ ಬರೆಯಲೇಬೇಕು ಎಂದು ಸಮೀಕ್ಷೆದಾರರು ಹೇಳುತ್ತಾರೆ.
ಗೃಹ ಜ್ಯೋತಿಗೂ, ಜಾತಿಗೂ ಏನು ಸಂಬಂಧ? ಎಲ್ಲಕ್ಕಿಂತ ಮುಖ್ಯವಾಗಿ ಈ ಫಾರಂ ನಲ್ಲಿ, ನಾನು ಗೃಹ ಜ್ಯೋತಿಗೆ ಸಂಬಂಽಸಿದ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಲು ಇಚ್ಛಿಸುವುದಿಲ್ಲ, ನನ್ನ ಮನೆಗೆ ನೀಡಿ ರುವ ವಿದ್ಯುತ್ ಸಂಪರ್ಕದ ಗೃಹ ಜ್ಯೋತಿ ಯೋಜನೆಯ ಲಾಭವನ್ನು ಸ್ಥಗಿತ ಗೊಳಿಸಲು ನನ್ನ ಅಭ್ಯಂತರವಿಲ್ಲ ಎಂದು ಪ್ರಿಂಟ್ ಆಗಿದೆ. ಇದರ ಕೆಳಗಡೆ ಸಹಿ ಹಾಕಲು ಸಮೀಕ್ಷೆ ಮಾಡಲು ಬಂದಿರುವವರು ಹೇಳುತ್ತಾರೆ. ಇದು ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿದೆ.
ಕೆಲವರು ಹೇಳುವಂತೆ ಮುಂದಿನ ದಿನಗಳಲ್ಲಿ ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರನ್ನು ಗೃಹ ಲಕ್ಷ್ಮಿ ಯೋಜನೆಯಿಂದ ಹೊರಗಿಡುವ ಹುನ್ನಾರ ಇರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು.
– ಬೂಕನಕೆರೆ ವಿಜೇಂದ್ರ, ಮೈಸೂರು
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೩೮.೫ ಸಾವಿರ ಜನ ಇನ್ಸ್ಟಾಗ್ರಾಮ್ ಫಾಲೋವರ್ಸ್ಗೆ ಮಾರ್ಗದರ್ಶನ ೨೦೦೬ರ ಜೂನ್ ೩೦ ರಂದು ಹುಟ್ಟಿದ…