Andolana originals

ಓದುಗರ ಪತ್ರ: ಇ-ಸ್ವತ್ತು ಗೊಂದಲ ಬಗೆಹರಿಸಿ

ಅಕ್ರಮ ಖಾತೆಗಳನ್ನು ಸಕ್ರಮಗೊಳಿಸಲು ಸರ್ಕಾರ ಕೈಗೊಂಡ ತಪ್ಪು ನಿರ್ಧಾರದಿಂದ ಲಕ್ಷಾಂತರ ಮಂದಿ ಇ-ಖಾತೆ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರದ ವೇಳೆ ವಿಷಯ ಪ್ರಸ್ತಾಪಿಸಿ ಹತ್ತಾರು ವರ್ಷಗಳಿಂದ ಅಕ್ರಮವಾಗಿ ಅನಧಿಕೃತ ಮನೆ ಗಳಲ್ಲಿ ವಾಸ ಮಾಡುವವರಿಂದ ಸರ್ಕಾರ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಬೇಕೆಂದು ಗಮನ ಸೆಳೆದಿದ್ದರು. ಸರ್ಕಾರ ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ೧೯೭೦ರ ನಂತರ ಟೌನ್ ಪ್ಲಾನ್ ನಿಬಂಧನೆಗೆ ಒಳಪಡದೇ ಲೇಔಟ್ ನಿರ್ಮಿಸಿದ್ದರೆ ಅಂತಹವರಿಗೂ ದಂಡ ವಿಧಿಸಬೇಕು.

ದ್ವಿಗುಣ ದಂಡ ವಸೂಲಿ ಮಾಡಿಕೊಂಡು ಎ ಖಾತೆದಾರರಿಗೂ ಬಿ-ಖಾತೆಗೆ ಪರಿವರ್ತಿಸಬೇಕು ಎಂದು ಪೌರಡಳಿತ ನಿರ್ದೇಶನಾಲಯ ಹೊರಡಿಸಿರುವ ಸುತ್ತೋಲೆಯಿಂದ ಎ-ಖಾತೆ ಹೊಂದಿರುವವರೆಲ್ಲರನ್ನೂ ಬಿ-ಖಾತೆಗೆ ಪರಿವರ್ತಿಸಲಾಗಿದೆ. ಇದರಿಂದ ಆಸ್ತಿಗಳ ಮೇಲೆ ಯಾವುದೇ ಸಾಲ ಪಡೆಯದ ಸ್ಥಿತಿ ಉಂಟಾಗಿದೆ. ಈ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸುವವರಿಗೆ ಸಕ್ರಮಗೊಳಿಸುವಂತೆ ಸೂಚಿಸಿದ್ದಾರೆ. ಇವರಿಗೆ ಯಾವುದೇ ದಂಡವೂ ಇಲ್ಲ ಎಂದು ತಿಳಿಸಿದ್ದಾರೆ.

ಹೀಗಾಗಿ ಸರ್ಕಾರದ ಈ ದ್ವಂದ್ವ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನವಶ್ಯವಾಗಿ ತೊಂದರೆ ಕೊಟ್ಟಂತಾಗಿದೆ. ಸರ್ಕಾರ ಈಗಿನ ಗೊಂದಲ ಬಗೆಹರಿಸಿ ಇಡೀ ರಾಜ್ಯದ ಜನತೆಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಿ.

-ಎ.ಎಚ್.ಗೋವಿಂದ, ಹಿರಿಯ ಪತ್ರಕರ್ತ, ಕೊಳ್ಳೇಗಾಲ.

ಆಂದೋಲನ ಡೆಸ್ಕ್

Recent Posts

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

49 seconds ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

17 mins ago

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

5 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

5 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

5 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

5 hours ago