Andolana originals

ಓದುಗರ ಪತ್ರ: ಇ-ಸ್ವತ್ತು ಗೊಂದಲ ಬಗೆಹರಿಸಿ

ಅಕ್ರಮ ಖಾತೆಗಳನ್ನು ಸಕ್ರಮಗೊಳಿಸಲು ಸರ್ಕಾರ ಕೈಗೊಂಡ ತಪ್ಪು ನಿರ್ಧಾರದಿಂದ ಲಕ್ಷಾಂತರ ಮಂದಿ ಇ-ಖಾತೆ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರದ ವೇಳೆ ವಿಷಯ ಪ್ರಸ್ತಾಪಿಸಿ ಹತ್ತಾರು ವರ್ಷಗಳಿಂದ ಅಕ್ರಮವಾಗಿ ಅನಧಿಕೃತ ಮನೆ ಗಳಲ್ಲಿ ವಾಸ ಮಾಡುವವರಿಂದ ಸರ್ಕಾರ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಬೇಕೆಂದು ಗಮನ ಸೆಳೆದಿದ್ದರು. ಸರ್ಕಾರ ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ೧೯೭೦ರ ನಂತರ ಟೌನ್ ಪ್ಲಾನ್ ನಿಬಂಧನೆಗೆ ಒಳಪಡದೇ ಲೇಔಟ್ ನಿರ್ಮಿಸಿದ್ದರೆ ಅಂತಹವರಿಗೂ ದಂಡ ವಿಧಿಸಬೇಕು.

ದ್ವಿಗುಣ ದಂಡ ವಸೂಲಿ ಮಾಡಿಕೊಂಡು ಎ ಖಾತೆದಾರರಿಗೂ ಬಿ-ಖಾತೆಗೆ ಪರಿವರ್ತಿಸಬೇಕು ಎಂದು ಪೌರಡಳಿತ ನಿರ್ದೇಶನಾಲಯ ಹೊರಡಿಸಿರುವ ಸುತ್ತೋಲೆಯಿಂದ ಎ-ಖಾತೆ ಹೊಂದಿರುವವರೆಲ್ಲರನ್ನೂ ಬಿ-ಖಾತೆಗೆ ಪರಿವರ್ತಿಸಲಾಗಿದೆ. ಇದರಿಂದ ಆಸ್ತಿಗಳ ಮೇಲೆ ಯಾವುದೇ ಸಾಲ ಪಡೆಯದ ಸ್ಥಿತಿ ಉಂಟಾಗಿದೆ. ಈ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸುವವರಿಗೆ ಸಕ್ರಮಗೊಳಿಸುವಂತೆ ಸೂಚಿಸಿದ್ದಾರೆ. ಇವರಿಗೆ ಯಾವುದೇ ದಂಡವೂ ಇಲ್ಲ ಎಂದು ತಿಳಿಸಿದ್ದಾರೆ.

ಹೀಗಾಗಿ ಸರ್ಕಾರದ ಈ ದ್ವಂದ್ವ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನವಶ್ಯವಾಗಿ ತೊಂದರೆ ಕೊಟ್ಟಂತಾಗಿದೆ. ಸರ್ಕಾರ ಈಗಿನ ಗೊಂದಲ ಬಗೆಹರಿಸಿ ಇಡೀ ರಾಜ್ಯದ ಜನತೆಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಿ.

-ಎ.ಎಚ್.ಗೋವಿಂದ, ಹಿರಿಯ ಪತ್ರಕರ್ತ, ಕೊಳ್ಳೇಗಾಲ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

10 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

10 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

11 hours ago