Andolana originals

ಓದುಗರ ಪತ್ರ: ಇ-ಸ್ವತ್ತು ಗೊಂದಲ ಬಗೆಹರಿಸಿ

ಅಕ್ರಮ ಖಾತೆಗಳನ್ನು ಸಕ್ರಮಗೊಳಿಸಲು ಸರ್ಕಾರ ಕೈಗೊಂಡ ತಪ್ಪು ನಿರ್ಧಾರದಿಂದ ಲಕ್ಷಾಂತರ ಮಂದಿ ಇ-ಖಾತೆ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರದ ವೇಳೆ ವಿಷಯ ಪ್ರಸ್ತಾಪಿಸಿ ಹತ್ತಾರು ವರ್ಷಗಳಿಂದ ಅಕ್ರಮವಾಗಿ ಅನಧಿಕೃತ ಮನೆ ಗಳಲ್ಲಿ ವಾಸ ಮಾಡುವವರಿಂದ ಸರ್ಕಾರ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಬೇಕೆಂದು ಗಮನ ಸೆಳೆದಿದ್ದರು. ಸರ್ಕಾರ ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ೧೯೭೦ರ ನಂತರ ಟೌನ್ ಪ್ಲಾನ್ ನಿಬಂಧನೆಗೆ ಒಳಪಡದೇ ಲೇಔಟ್ ನಿರ್ಮಿಸಿದ್ದರೆ ಅಂತಹವರಿಗೂ ದಂಡ ವಿಧಿಸಬೇಕು.

ದ್ವಿಗುಣ ದಂಡ ವಸೂಲಿ ಮಾಡಿಕೊಂಡು ಎ ಖಾತೆದಾರರಿಗೂ ಬಿ-ಖಾತೆಗೆ ಪರಿವರ್ತಿಸಬೇಕು ಎಂದು ಪೌರಡಳಿತ ನಿರ್ದೇಶನಾಲಯ ಹೊರಡಿಸಿರುವ ಸುತ್ತೋಲೆಯಿಂದ ಎ-ಖಾತೆ ಹೊಂದಿರುವವರೆಲ್ಲರನ್ನೂ ಬಿ-ಖಾತೆಗೆ ಪರಿವರ್ತಿಸಲಾಗಿದೆ. ಇದರಿಂದ ಆಸ್ತಿಗಳ ಮೇಲೆ ಯಾವುದೇ ಸಾಲ ಪಡೆಯದ ಸ್ಥಿತಿ ಉಂಟಾಗಿದೆ. ಈ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸುವವರಿಗೆ ಸಕ್ರಮಗೊಳಿಸುವಂತೆ ಸೂಚಿಸಿದ್ದಾರೆ. ಇವರಿಗೆ ಯಾವುದೇ ದಂಡವೂ ಇಲ್ಲ ಎಂದು ತಿಳಿಸಿದ್ದಾರೆ.

ಹೀಗಾಗಿ ಸರ್ಕಾರದ ಈ ದ್ವಂದ್ವ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನವಶ್ಯವಾಗಿ ತೊಂದರೆ ಕೊಟ್ಟಂತಾಗಿದೆ. ಸರ್ಕಾರ ಈಗಿನ ಗೊಂದಲ ಬಗೆಹರಿಸಿ ಇಡೀ ರಾಜ್ಯದ ಜನತೆಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಿ.

-ಎ.ಎಚ್.ಗೋವಿಂದ, ಹಿರಿಯ ಪತ್ರಕರ್ತ, ಕೊಳ್ಳೇಗಾಲ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago