Andolana originals

ಓದುಗರ ಪತ್ರ: ಇ-ಸ್ವತ್ತು ಗೊಂದಲ ಬಗೆಹರಿಸಿ

ಅಕ್ರಮ ಖಾತೆಗಳನ್ನು ಸಕ್ರಮಗೊಳಿಸಲು ಸರ್ಕಾರ ಕೈಗೊಂಡ ತಪ್ಪು ನಿರ್ಧಾರದಿಂದ ಲಕ್ಷಾಂತರ ಮಂದಿ ಇ-ಖಾತೆ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರದ ವೇಳೆ ವಿಷಯ ಪ್ರಸ್ತಾಪಿಸಿ ಹತ್ತಾರು ವರ್ಷಗಳಿಂದ ಅಕ್ರಮವಾಗಿ ಅನಧಿಕೃತ ಮನೆ ಗಳಲ್ಲಿ ವಾಸ ಮಾಡುವವರಿಂದ ಸರ್ಕಾರ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಬೇಕೆಂದು ಗಮನ ಸೆಳೆದಿದ್ದರು. ಸರ್ಕಾರ ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ೧೯೭೦ರ ನಂತರ ಟೌನ್ ಪ್ಲಾನ್ ನಿಬಂಧನೆಗೆ ಒಳಪಡದೇ ಲೇಔಟ್ ನಿರ್ಮಿಸಿದ್ದರೆ ಅಂತಹವರಿಗೂ ದಂಡ ವಿಧಿಸಬೇಕು.

ದ್ವಿಗುಣ ದಂಡ ವಸೂಲಿ ಮಾಡಿಕೊಂಡು ಎ ಖಾತೆದಾರರಿಗೂ ಬಿ-ಖಾತೆಗೆ ಪರಿವರ್ತಿಸಬೇಕು ಎಂದು ಪೌರಡಳಿತ ನಿರ್ದೇಶನಾಲಯ ಹೊರಡಿಸಿರುವ ಸುತ್ತೋಲೆಯಿಂದ ಎ-ಖಾತೆ ಹೊಂದಿರುವವರೆಲ್ಲರನ್ನೂ ಬಿ-ಖಾತೆಗೆ ಪರಿವರ್ತಿಸಲಾಗಿದೆ. ಇದರಿಂದ ಆಸ್ತಿಗಳ ಮೇಲೆ ಯಾವುದೇ ಸಾಲ ಪಡೆಯದ ಸ್ಥಿತಿ ಉಂಟಾಗಿದೆ. ಈ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸುವವರಿಗೆ ಸಕ್ರಮಗೊಳಿಸುವಂತೆ ಸೂಚಿಸಿದ್ದಾರೆ. ಇವರಿಗೆ ಯಾವುದೇ ದಂಡವೂ ಇಲ್ಲ ಎಂದು ತಿಳಿಸಿದ್ದಾರೆ.

ಹೀಗಾಗಿ ಸರ್ಕಾರದ ಈ ದ್ವಂದ್ವ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನವಶ್ಯವಾಗಿ ತೊಂದರೆ ಕೊಟ್ಟಂತಾಗಿದೆ. ಸರ್ಕಾರ ಈಗಿನ ಗೊಂದಲ ಬಗೆಹರಿಸಿ ಇಡೀ ರಾಜ್ಯದ ಜನತೆಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಿ.

-ಎ.ಎಚ್.ಗೋವಿಂದ, ಹಿರಿಯ ಪತ್ರಕರ್ತ, ಕೊಳ್ಳೇಗಾಲ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

10 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

11 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

12 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

12 hours ago