Andolana originals

ಓದುಗರ ಪತ್ರ: ಇ-ಸ್ವತ್ತು ಗೊಂದಲ ಬಗೆಹರಿಸಿ

ಅಕ್ರಮ ಖಾತೆಗಳನ್ನು ಸಕ್ರಮಗೊಳಿಸಲು ಸರ್ಕಾರ ಕೈಗೊಂಡ ತಪ್ಪು ನಿರ್ಧಾರದಿಂದ ಲಕ್ಷಾಂತರ ಮಂದಿ ಇ-ಖಾತೆ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರದ ವೇಳೆ ವಿಷಯ ಪ್ರಸ್ತಾಪಿಸಿ ಹತ್ತಾರು ವರ್ಷಗಳಿಂದ ಅಕ್ರಮವಾಗಿ ಅನಧಿಕೃತ ಮನೆ ಗಳಲ್ಲಿ ವಾಸ ಮಾಡುವವರಿಂದ ಸರ್ಕಾರ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಬೇಕೆಂದು ಗಮನ ಸೆಳೆದಿದ್ದರು. ಸರ್ಕಾರ ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ೧೯೭೦ರ ನಂತರ ಟೌನ್ ಪ್ಲಾನ್ ನಿಬಂಧನೆಗೆ ಒಳಪಡದೇ ಲೇಔಟ್ ನಿರ್ಮಿಸಿದ್ದರೆ ಅಂತಹವರಿಗೂ ದಂಡ ವಿಧಿಸಬೇಕು.

ದ್ವಿಗುಣ ದಂಡ ವಸೂಲಿ ಮಾಡಿಕೊಂಡು ಎ ಖಾತೆದಾರರಿಗೂ ಬಿ-ಖಾತೆಗೆ ಪರಿವರ್ತಿಸಬೇಕು ಎಂದು ಪೌರಡಳಿತ ನಿರ್ದೇಶನಾಲಯ ಹೊರಡಿಸಿರುವ ಸುತ್ತೋಲೆಯಿಂದ ಎ-ಖಾತೆ ಹೊಂದಿರುವವರೆಲ್ಲರನ್ನೂ ಬಿ-ಖಾತೆಗೆ ಪರಿವರ್ತಿಸಲಾಗಿದೆ. ಇದರಿಂದ ಆಸ್ತಿಗಳ ಮೇಲೆ ಯಾವುದೇ ಸಾಲ ಪಡೆಯದ ಸ್ಥಿತಿ ಉಂಟಾಗಿದೆ. ಈ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸುವವರಿಗೆ ಸಕ್ರಮಗೊಳಿಸುವಂತೆ ಸೂಚಿಸಿದ್ದಾರೆ. ಇವರಿಗೆ ಯಾವುದೇ ದಂಡವೂ ಇಲ್ಲ ಎಂದು ತಿಳಿಸಿದ್ದಾರೆ.

ಹೀಗಾಗಿ ಸರ್ಕಾರದ ಈ ದ್ವಂದ್ವ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನವಶ್ಯವಾಗಿ ತೊಂದರೆ ಕೊಟ್ಟಂತಾಗಿದೆ. ಸರ್ಕಾರ ಈಗಿನ ಗೊಂದಲ ಬಗೆಹರಿಸಿ ಇಡೀ ರಾಜ್ಯದ ಜನತೆಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಿ.

-ಎ.ಎಚ್.ಗೋವಿಂದ, ಹಿರಿಯ ಪತ್ರಕರ್ತ, ಕೊಳ್ಳೇಗಾಲ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago