ಓದುಗರ ಪತ್ರ
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ ಸರಕಾರದ ಕಾರ್ಯಾಚರಣೆಯಲ್ಲ. ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಸುಪ್ರೀಂಕೋರ್ಟ್ ಆದೇಶವೂ ಇದೆ. ಇದು ಪ್ರತಿಯೊಬ್ಬ ನಾಗರಿಕನೂ ಪಾಲ್ಗೊಳ್ಳಬೇಕಾದ ಜನಾಂದೋಲನ ಆಗಬೇಕು. ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಟ್ರಾಫಿಕ್ ದಟ್ಟಣೆ ಮತ್ತು ಪಾದಚಾರಿ ಮಾರ್ಗಗಳ ಒತ್ತುವರಿಯು, ಪಾದಚಾರಿಗಳ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವುದರಿಂದ ಒತ್ತುವರಿ ತೆರವು ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿ ಒತ್ತುವರಿ ತೆರವು ಮಾಡಿಸುತ್ತಿರುವುದು ಶ್ಲಾಘನೀಯ.
ಕಂದಾಯ ಸಚಿವರಾಗಿzಗ ಇಲಾಖೆಯನ್ನು ಒಂದು ತಹಬಂದಿಗೆ ತಂದು ಜನಮನ್ನಣೆ ಪಡೆದ ಕೃಷ್ಣ ಬೈರೇಗೌಡರು ಈಗ ಜಿಬಿಎ ಸಚಿವರಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಕಂಕಣ ತೊಟ್ಟಿರುವುದು ಸ್ವಾಗತಾರ್ಹ.
ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಬೆಂಗಳೂರು ನಗರದ ಎಲ್ಲ ಭಾಗಗಳಲ್ಲಿಯೂ ಪಾದಚಾರಿ ಮಾರ್ಗ ಅತಿಕ್ರಮಣವನ್ನು ಮುಕ್ತಗೊಳಿಸುವ ಗುರಿಯನ್ನು ಜಿಬಿಎ ಹೊಂದಿದೆ, ಎಂದು ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಹೇಳಿರುವುದು ಒಳ್ಳೆಯ ಬೆಳವಣಿಗೆ. ರಾಜ್ಯದ ಎಲ್ಲ ನಗರಗಳಲ್ಲೂ ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡುವುದು ಸೂಕ್ತ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…
ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…
ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…