ಓದುಗರ ಪತ್ರ
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ ಹಂತಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಕೆರೆ ಏರಿಯ ರಸ್ತೆಯಲ್ಲಿ ಸುಮಾರು ೨೫ ರಿಂದ ೩೦ ಬೀದಿ ದೀಪಗಳಿವೆ. ಆದರೆ ರಾತ್ರಿ ವೇಳೆ ಈ ಯಾವ ದೀಪವೂ ಬೆಳಗುವುದಿಲ್ಲ. ಇದರಿಂದ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ ದಟ್ಟ ಅರಣ್ಯದಲ್ಲಿ ಪ್ರಯಾಣಿಸಿದಂತೆ ಭಾಸವಾಗುತ್ತದೆ. ನಗರ ಪಾಲಿಕೆ ಅಧಿಕಾರಿಗಳು ಲಿಂಗಾಂಬುಧಿ ಕೆರೆ ಏರಿಯ ಮೇಲಿನ ರಸ್ತೆಯಲ್ಲಿರುವ ಬೀದಿ ದೀಪಗಳನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…