ಓದುಗರ ಪತ್ರ
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ ಹಂತಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಕೆರೆ ಏರಿಯ ರಸ್ತೆಯಲ್ಲಿ ಸುಮಾರು ೨೫ ರಿಂದ ೩೦ ಬೀದಿ ದೀಪಗಳಿವೆ. ಆದರೆ ರಾತ್ರಿ ವೇಳೆ ಈ ಯಾವ ದೀಪವೂ ಬೆಳಗುವುದಿಲ್ಲ. ಇದರಿಂದ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ ದಟ್ಟ ಅರಣ್ಯದಲ್ಲಿ ಪ್ರಯಾಣಿಸಿದಂತೆ ಭಾಸವಾಗುತ್ತದೆ. ನಗರ ಪಾಲಿಕೆ ಅಧಿಕಾರಿಗಳು ಲಿಂಗಾಂಬುಧಿ ಕೆರೆ ಏರಿಯ ಮೇಲಿನ ರಸ್ತೆಯಲ್ಲಿರುವ ಬೀದಿ ದೀಪಗಳನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…