ಓದುಗರ ಪತ್ರ
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ ಅಸಮರ್ಪಕ ಕಾಮಗಾರಿಯಿಂದಾಗಿ ಈ ರಸ್ತೆಯಲ್ಲಿ ಹಲವಾರು ಬಾರಿ ರಸ್ತೆ ಕುಸಿತ ಉಂಟಾಗಿದೆ. ಆದರೂ ಮಹಾನಗರ ಪಾಲಿಕೆಯವರು ನೆಪಮಾತ್ರಕ್ಕೆ ಗುಂಡಿ ಮುಚ್ಚುವುದೇ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಲು ಕಾರಣವಾಗಿದೆ.
ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿವೆ. ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡರು ಇತ್ತ ಸುಳಿಯುವುದೇ ಇಲ್ಲ. ಹಾಗಾದರೆ ಸಾರ್ವಜನಿಕರ ಸಮಸ್ಯೆಗಳನ್ನು ಯಾರು ಪರಿಹರಿಸಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ಈಗಲಾದರೂ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗುಂಡಿ ಬಿದ್ದಿರುವ ರಸ್ತೆ ಯನ್ನು ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಚಂದ್ರಶೇಖರ್, ಡಿ.ಸುಬ್ಬಯ್ಯ ರಸ್ತೆ, ಮೈಸೂರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…