ಓದುಗರ ಪತ್ರ
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ ಅಸಮರ್ಪಕ ಕಾಮಗಾರಿಯಿಂದಾಗಿ ಈ ರಸ್ತೆಯಲ್ಲಿ ಹಲವಾರು ಬಾರಿ ರಸ್ತೆ ಕುಸಿತ ಉಂಟಾಗಿದೆ. ಆದರೂ ಮಹಾನಗರ ಪಾಲಿಕೆಯವರು ನೆಪಮಾತ್ರಕ್ಕೆ ಗುಂಡಿ ಮುಚ್ಚುವುದೇ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಲು ಕಾರಣವಾಗಿದೆ.
ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿವೆ. ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡರು ಇತ್ತ ಸುಳಿಯುವುದೇ ಇಲ್ಲ. ಹಾಗಾದರೆ ಸಾರ್ವಜನಿಕರ ಸಮಸ್ಯೆಗಳನ್ನು ಯಾರು ಪರಿಹರಿಸಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ಈಗಲಾದರೂ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗುಂಡಿ ಬಿದ್ದಿರುವ ರಸ್ತೆ ಯನ್ನು ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಚಂದ್ರಶೇಖರ್, ಡಿ.ಸುಬ್ಬಯ್ಯ ರಸ್ತೆ, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…