ಓದುಗರ ಪತ್ರ
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ ಅಸಮರ್ಪಕ ಕಾಮಗಾರಿಯಿಂದಾಗಿ ಈ ರಸ್ತೆಯಲ್ಲಿ ಹಲವಾರು ಬಾರಿ ರಸ್ತೆ ಕುಸಿತ ಉಂಟಾಗಿದೆ. ಆದರೂ ಮಹಾನಗರ ಪಾಲಿಕೆಯವರು ನೆಪಮಾತ್ರಕ್ಕೆ ಗುಂಡಿ ಮುಚ್ಚುವುದೇ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಲು ಕಾರಣವಾಗಿದೆ.
ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿವೆ. ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡರು ಇತ್ತ ಸುಳಿಯುವುದೇ ಇಲ್ಲ. ಹಾಗಾದರೆ ಸಾರ್ವಜನಿಕರ ಸಮಸ್ಯೆಗಳನ್ನು ಯಾರು ಪರಿಹರಿಸಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ಈಗಲಾದರೂ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗುಂಡಿ ಬಿದ್ದಿರುವ ರಸ್ತೆ ಯನ್ನು ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಚಂದ್ರಶೇಖರ್, ಡಿ.ಸುಬ್ಬಯ್ಯ ರಸ್ತೆ, ಮೈಸೂರು
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…